7:44 PM Wednesday10 - June 2026
ಬ್ರೇಕಿಂಗ್ ನ್ಯೂಸ್
ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ…

ಇತ್ತೀಚಿನ ಸುದ್ದಿ

ಮಾಜಿ ಸಿಎಂ ಕುಮಾರಸ್ವಾಮಿ ಜತೆ ಹಾಲಿ ಸಿಎಂ ಸಿದ್ದರಾಮಯ್ಯರೂ ದತ್ತಪೀಠಕ್ಕೆ ಬರಲಿ: ಸಿ.ಟಿ. ರವಿ

21/11/2023, 17:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡ ದತ್ತಪೀಠಕ್ಕೆ ಬರಲಿ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಮನವಿ ಮಾಡಿದ್ದಾರೆ.


ಮಾಜಿ ಸಿಎಂ ಹೆಚ್ಡಿಕೆ ಹೇಳಿಕೆಯು ಸಿಎಂ ಸಿದ್ದರಾಮಯ್ಯನವರಿಗೂ ಮಾದರಿ. ಅವರು ಕೂಡ ದತ್ತಪೀಠಕ್ಕೆ ಬರಲಿ.
ನಾನು ಹಿಂದೂ ಅಲ್ವಾ, ನನ್ನ ಹೆಸರಲ್ಲೇ ರಾಮ ಇದ್ದಾನೆ ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ನೀವು ಮಾಲೆ ಹಾಕಿಕೊಂಡು ಬಂದರೆ ನಮ್ಮ ಸತ್ಯದ ಹೋರಾಟಕ್ಕೆ ಬಲ ಬರಲಿದೆ ಎಂದು ಮಾಧ್ಯಮ ಜತೆ ಮಾತನಾಡಿದ ರವಿ ನುಡಿದರು.
ಹಿಂದು ಎಂದು ಹೇಳಿಕೊಳ್ಳಲು ಗರ್ವ ಪಡಬೇಕು. ಸಮಾಜ ಇದನ್ನೇ ಕೇಳೋದು. ನೀವು ಮಾಲೆ ಹಾಕಿದರೆ ಸಚಿವ ಜಮೀರ್ ಅವರು ಕೂಡ ಮಾಲೆ ಹಾಕೇ ಹಾಕುತ್ತಾರೆ. ಆಗ 5 ದಶಕದ ಹೋರಾಟಕ್ಕೆ ಬಲ ಬರುತ್ತೆ, ಸತ್ಯವನ್ನ ಎತ್ತಿ ಹಿಡಿದಂತಾಗುತ್ತೆ. ನಮ್ಮ ಧರ್ಮದ ಪ್ರಕಾರ ನಡೆದುಕೊಳ್ಳಲು ಯಾರಿಗೆ ಏಕೆ ಹೆದರಬೇಕು ಎಂದು ಅವರು ಪ್ರಶ್ನಿಸಿದರು.
ಯಾರೂ ಎಲೆಕ್ಷನ್ ಟೈಂ ನಲ್ಲಿ ಮಾತ್ರ ಹಿಂದೂಗಳಾಗಬಾರದು. ಜೀವನ ಪರ್ಯಂತ ಹಿಂದೂಗಳಾಬೇಕು. ಹಿಂದುತ್ವದ ವಿಚಾರ ಬಂದಾಗ ಹಿಂದೆ ನೋಡಲೇಬಾರದು ಮುಂದಕ್ಕೆ ನೋಡಬೇಕು ಎಂದು ಸಿ.ಟಿ. ರವಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು