9:01 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮಾಜಿ ಸಿಎಂ ಕುಮಾರಸ್ವಾಮಿ ಜತೆ ಹಾಲಿ ಸಿಎಂ ಸಿದ್ದರಾಮಯ್ಯರೂ ದತ್ತಪೀಠಕ್ಕೆ ಬರಲಿ: ಸಿ.ಟಿ. ರವಿ

21/11/2023, 17:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡ ದತ್ತಪೀಠಕ್ಕೆ ಬರಲಿ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಮನವಿ ಮಾಡಿದ್ದಾರೆ.


ಮಾಜಿ ಸಿಎಂ ಹೆಚ್ಡಿಕೆ ಹೇಳಿಕೆಯು ಸಿಎಂ ಸಿದ್ದರಾಮಯ್ಯನವರಿಗೂ ಮಾದರಿ. ಅವರು ಕೂಡ ದತ್ತಪೀಠಕ್ಕೆ ಬರಲಿ.
ನಾನು ಹಿಂದೂ ಅಲ್ವಾ, ನನ್ನ ಹೆಸರಲ್ಲೇ ರಾಮ ಇದ್ದಾನೆ ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ನೀವು ಮಾಲೆ ಹಾಕಿಕೊಂಡು ಬಂದರೆ ನಮ್ಮ ಸತ್ಯದ ಹೋರಾಟಕ್ಕೆ ಬಲ ಬರಲಿದೆ ಎಂದು ಮಾಧ್ಯಮ ಜತೆ ಮಾತನಾಡಿದ ರವಿ ನುಡಿದರು.
ಹಿಂದು ಎಂದು ಹೇಳಿಕೊಳ್ಳಲು ಗರ್ವ ಪಡಬೇಕು. ಸಮಾಜ ಇದನ್ನೇ ಕೇಳೋದು. ನೀವು ಮಾಲೆ ಹಾಕಿದರೆ ಸಚಿವ ಜಮೀರ್ ಅವರು ಕೂಡ ಮಾಲೆ ಹಾಕೇ ಹಾಕುತ್ತಾರೆ. ಆಗ 5 ದಶಕದ ಹೋರಾಟಕ್ಕೆ ಬಲ ಬರುತ್ತೆ, ಸತ್ಯವನ್ನ ಎತ್ತಿ ಹಿಡಿದಂತಾಗುತ್ತೆ. ನಮ್ಮ ಧರ್ಮದ ಪ್ರಕಾರ ನಡೆದುಕೊಳ್ಳಲು ಯಾರಿಗೆ ಏಕೆ ಹೆದರಬೇಕು ಎಂದು ಅವರು ಪ್ರಶ್ನಿಸಿದರು.
ಯಾರೂ ಎಲೆಕ್ಷನ್ ಟೈಂ ನಲ್ಲಿ ಮಾತ್ರ ಹಿಂದೂಗಳಾಗಬಾರದು. ಜೀವನ ಪರ್ಯಂತ ಹಿಂದೂಗಳಾಬೇಕು. ಹಿಂದುತ್ವದ ವಿಚಾರ ಬಂದಾಗ ಹಿಂದೆ ನೋಡಲೇಬಾರದು ಮುಂದಕ್ಕೆ ನೋಡಬೇಕು ಎಂದು ಸಿ.ಟಿ. ರವಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು