3:07 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

07/05/2025, 16:24

ಬೆಂಗಳೂರು(reporterkarnataka.com): ಪಹಲ್ಗಾಮ್ ನಲ್ಲಿ ಅಮಾಯಕ ಭಾರತೀಯರ ಮೇಲೆ ದಾಳಿ ಮಾಡಿದ್ದ ಪಾಕ್ ಪೋಷಿತ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿ ಪ್ರತ್ಯುತ್ತರ ನೀಡಿದ್ದು, ಸಿಂಧೂರ ಕಳೆದು ಕೊಂಡಿರುವ ಹೆಣ್ಣು ಮಕ್ಕಳ ಪ್ರತೀಕಾರವಾಗಿ ಇದು ಆಪರೇಷನ್ ಸಿಂಧೂರ ದಾಳಿ ನಡೆದಿದ್ದು, ಸೇನೆಯ ಕಾರ್ಯಕ್ಕೆ ದೇಶವೇ ಹೆಮ್ಮೆ ಪಡುವಂತೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪಾಕಿಸ್ತಾನವು ಅಂತಾರಾಷ್ಟ್ರೀಯ ಭಯೋತ್ಪಾದಕರ ನೆಲೆಗಟ್ಟು ಮತ್ತು ತರಬೇತಿ ನೀಡುವ ಫ್ಯಾಕ್ಟರಿ ಆಗಿ ಪರಿವರ್ತನೆ ಆಗಿದೆ. ಇದು ಕೇವಲ ಭಾರತ ಅಷ್ಟೇ ಅಲ್ಲ ಇಡೀ ವಿಶ್ವದಲ್ಲೇ ಭಯೋತ್ಪಾದನೆ ಕಿತ್ತೊಗೆಯುವ ಕೆಲಸ ಭಾರತೀಯ ಸೇನೆ ಮಾಡಿದೆ. ಇದು ಇನ್ನೂ ಪ್ರಾರಂಭ ಪಾಕಿಸ್ತಾನದಲ್ಲಿರುವ ಕೊನೆಯ ಭಯೋತ್ಪಾದಕರಿರುವವರೆಗೂ ಈ ಕಾರ್ಯಾಚರಣೆ ನಡೆಯುತ್ತದೆ ಎಂದು ಹೇಳಿದ್ದಾರೆ.
ಇಂತಹ ಸಂದರ್ಭದಲ್ಲಿ ಎಲ್ಲ ಭಾರತೀಯರು ಒಂದಾಗಿ ನಮ್ಮ ಪ್ರಧಾನಿ ನರೇಂದ್ರ ಮೊದಿ ಹಾಗೂ ನಮ್ಮ ದೇಶದ ಪ್ರಬಲ ಸೇನಾ ಪಡೆ ಹಿಂದೆ ಒಗ್ಗಟ್ಟಾಗಿ ನಿಲ್ಲಬೇಕು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲ ದೇಶಗಳು ಭಾರತದ ಈ ಕಾರ್ಯಾಚರಣೆಗೆ ಬೆಂಬಲ ಸೂಚಿಸಬೇಕು.
ಪಹಲ್ಗಾಮ್ ದಾಳಿಯಲ್ಲಿ ಮರಣ ಹೊಂದಿದ ಹಲವಾರು ಮುಗ್ದ ಭಾರತಿಯರ ಕುಟುಂಬಗಳ ಭಾವನೆ ಹಾಗೂ ತಮ್ಮ ಸಿಂಧೂರ ಕಳೆದು ಕೊಂಡಿರುವ ಹೆಣ್ಣು ಮಕ್ಕಳ ಪ್ರತೀಕಾರವಾಗಿ ಇದು ಆಪರೇಷನ್ ಸಿಂಧೂರ ಎಂದು ನಮ್ಮ ಪ್ರಧಾನಮಂತ್ರಿ ಹೆಸರಿಸಿ, ಹೆಸರಿಗೆ ತಕ್ಕ ಹಾಗೆ ದಾಳಿ ಮಾಡಿದ್ದಾರೆ. ಅವರ ಜೊತೆಗೆ ನಿಂತ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಜೈಶಂಕರ್ ಮತ್ತು ಭಾರತೀಯ ಸೇನೆಗೆ ಹೃದಯ ಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು