4:20 AM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಮಾಜಿ ಸಂಸದ ದಿವಂಗತ ದೃವನಾರಾಯಣ್ ಹಟ್ಟುಹಬ್ಬ: ಬೃಹತ್ ಉದ್ಯೋಗ ಮೇಳ; 100ಕ್ಕೂ ಹೆಚ್ಚು ಕಂಪನಿಗಳು ಭಾಗಿ

31/07/2024, 18:46

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮಾಜಿ ಸಂಸದ ದಿವಂಗತ ದೃವನಾರಾಯಣ್ ಅಭಿಮಾನಿ ಬಳಗದ ವತಿಯಿಂದ ಇಂದು ಅವರ ಹುಟ್ಟು ಹಬ್ಬದ ಪ್ರಯುಕ್ತ ನಂಜನಗೂಡಿನಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಿತು.
ಮಾಜಿ ಸಂಸದ ಡಿ.ಕೆ. ಸುರೇಶ್ ಸೇರಿದಂತೆ ಮತ್ತಿತರ ಗಣ್ಯರು ದೀಪ ಬೆಳಗಿಸಿ ಧ್ರುವನಾರಾಯಣ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.‌
ಬಳಿಕ ಅವರು ಮಾತನಾಡಿ ದೃವನಾರಾಯಣ್ ಅವರು ಮಾಡಿಕೊಂಡು ಬರುತ್ತಿದ್ದ ಜನಪರ ಕೆಲಸಗಳನ್ನು ಅವರ ಪುತ್ರರಾದ ಶಾಸಕ ದರ್ಶನ್ ಧ್ರುವನಾರಾಯಣ್ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಅವರ ಕನಸನ್ನು ಈಡೇರಿಸುವ ಸಲುವಾಗಿ ಹಾಗೂ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ದೃಷ್ಟಿಯಿಂದ ಇಂತಹ ಕೆಲಸ ನಿಜಕ್ಕೂ ಮೆಚ್ಚುವಂತಹದ್ದೆ ಎಂದು ಕಾರ್ಯಕ್ರಮ ಹಾಗೂ ಶಾಸಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಈ ಭಾಗದ ನಿರುದ್ಯೋಗಿ ಯುವಕ ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ಶಾಸಕ ದರ್ಶನ್ ದ್ರುವ ನಾರಾಯಣ್ ಮಾತನಾಡಿ ನಮ್ಮ ತಂದೆಯವರು ಶಾಸಕರಾಗಿ, ಸಂಸದರಾಗಿ ಈ ಭಾಗಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಅದೇ ರೀತಿ ನಾನು ಕೂಡ ಅವರ ದಾರಿಯಲ್ಲಿಯೇ ಸಾಗಿ ಉತ್ತಮ ಕೆಲಸ ಮಾಡುತ್ತೇನೆ ನಿಮ್ಮ ಸಹಕಾರ ಬೆಂಬಲ ಯಾವಾಗಲೂ ಹೀಗೆ ಇರಲಿ ಎಂದರು.
ನೂರಕ್ಕೂ ಹೆಚ್ಚು ವಿವಿಧ ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಉದ್ಯೋಗ ಹರಸಿ ಬಂದ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ನೀಡಲು ಮುಂದಾಗಿದ್ದವು.
ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಡಿಗ್ರಿ ಸೇರಿದಂತೆ, ಸುಮಾರು 2,000 ಯುವಕ ಯುವತಿಯರು ಉದ್ಯೋಗ ಮೇಳದಲ್ಲಿ ಕೆಲಸಕ್ಕಾಗಿ ನೊಂದಣಿ ಮಾಡಿಕೊಂಡಿದ್ದರು.
ಮೇಳದಲ್ಲಿ ಹಲವು ಕಂಪನಿಗಳಿಂದ 500ಕ್ಕೂ ಹೆಚ್ಚು ಅಭ್ಯರ್ಥಿಗಳು ನೇರ ಉದ್ಯೋಗ ಪಡೆದುಕೊಂಡಿರುತ್ತಾರೆ.
ಇದರಲ್ಲಿ ವಿಶೇಷವಾಗಿ ನಾಲ್ಕು ಮಂದಿ ವಿಕಲಚೇತನರಿಗೂ ಸಹ ಉದ್ಯೋಗ ಸಿಕ್ಕಿ ಖಾತರಿ ಪತ್ರವನ್ನು ಸಹ ನೀಡಲಾಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ಶಾಸಕ ಗಣೇಶ್ ಪ್ರಸಾದ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ದೀಪಕ್, ಧೀರನ್ ದ್ರುವ ನಾರಾಯಣ್, ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಬಸವರಾಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ವಿಜಯ್ ಕುಮಾರ್ ನಂಜನಗೂಡು ಉಸ್ತುವಾರಿ ಶ್ರೀಕಂಠ, ಕೆಪಿಸಿಸಿ ಕಾರ್ಯದರ್ಶಿ ಕಾವೇರಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶಂಕರ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು