7:03 AM Tuesday28 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ಮಾಜಿ ಸಂಸದ ದಿವಂಗತ ದೃವನಾರಾಯಣ್ ಹಟ್ಟುಹಬ್ಬ: ಬೃಹತ್ ಉದ್ಯೋಗ ಮೇಳ; 100ಕ್ಕೂ ಹೆಚ್ಚು ಕಂಪನಿಗಳು ಭಾಗಿ

31/07/2024, 18:46

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮಾಜಿ ಸಂಸದ ದಿವಂಗತ ದೃವನಾರಾಯಣ್ ಅಭಿಮಾನಿ ಬಳಗದ ವತಿಯಿಂದ ಇಂದು ಅವರ ಹುಟ್ಟು ಹಬ್ಬದ ಪ್ರಯುಕ್ತ ನಂಜನಗೂಡಿನಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಿತು.
ಮಾಜಿ ಸಂಸದ ಡಿ.ಕೆ. ಸುರೇಶ್ ಸೇರಿದಂತೆ ಮತ್ತಿತರ ಗಣ್ಯರು ದೀಪ ಬೆಳಗಿಸಿ ಧ್ರುವನಾರಾಯಣ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.‌
ಬಳಿಕ ಅವರು ಮಾತನಾಡಿ ದೃವನಾರಾಯಣ್ ಅವರು ಮಾಡಿಕೊಂಡು ಬರುತ್ತಿದ್ದ ಜನಪರ ಕೆಲಸಗಳನ್ನು ಅವರ ಪುತ್ರರಾದ ಶಾಸಕ ದರ್ಶನ್ ಧ್ರುವನಾರಾಯಣ್ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಅವರ ಕನಸನ್ನು ಈಡೇರಿಸುವ ಸಲುವಾಗಿ ಹಾಗೂ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ದೃಷ್ಟಿಯಿಂದ ಇಂತಹ ಕೆಲಸ ನಿಜಕ್ಕೂ ಮೆಚ್ಚುವಂತಹದ್ದೆ ಎಂದು ಕಾರ್ಯಕ್ರಮ ಹಾಗೂ ಶಾಸಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಈ ಭಾಗದ ನಿರುದ್ಯೋಗಿ ಯುವಕ ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ಶಾಸಕ ದರ್ಶನ್ ದ್ರುವ ನಾರಾಯಣ್ ಮಾತನಾಡಿ ನಮ್ಮ ತಂದೆಯವರು ಶಾಸಕರಾಗಿ, ಸಂಸದರಾಗಿ ಈ ಭಾಗಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಅದೇ ರೀತಿ ನಾನು ಕೂಡ ಅವರ ದಾರಿಯಲ್ಲಿಯೇ ಸಾಗಿ ಉತ್ತಮ ಕೆಲಸ ಮಾಡುತ್ತೇನೆ ನಿಮ್ಮ ಸಹಕಾರ ಬೆಂಬಲ ಯಾವಾಗಲೂ ಹೀಗೆ ಇರಲಿ ಎಂದರು.
ನೂರಕ್ಕೂ ಹೆಚ್ಚು ವಿವಿಧ ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಉದ್ಯೋಗ ಹರಸಿ ಬಂದ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ನೀಡಲು ಮುಂದಾಗಿದ್ದವು.
ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಡಿಗ್ರಿ ಸೇರಿದಂತೆ, ಸುಮಾರು 2,000 ಯುವಕ ಯುವತಿಯರು ಉದ್ಯೋಗ ಮೇಳದಲ್ಲಿ ಕೆಲಸಕ್ಕಾಗಿ ನೊಂದಣಿ ಮಾಡಿಕೊಂಡಿದ್ದರು.
ಮೇಳದಲ್ಲಿ ಹಲವು ಕಂಪನಿಗಳಿಂದ 500ಕ್ಕೂ ಹೆಚ್ಚು ಅಭ್ಯರ್ಥಿಗಳು ನೇರ ಉದ್ಯೋಗ ಪಡೆದುಕೊಂಡಿರುತ್ತಾರೆ.
ಇದರಲ್ಲಿ ವಿಶೇಷವಾಗಿ ನಾಲ್ಕು ಮಂದಿ ವಿಕಲಚೇತನರಿಗೂ ಸಹ ಉದ್ಯೋಗ ಸಿಕ್ಕಿ ಖಾತರಿ ಪತ್ರವನ್ನು ಸಹ ನೀಡಲಾಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ಶಾಸಕ ಗಣೇಶ್ ಪ್ರಸಾದ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ದೀಪಕ್, ಧೀರನ್ ದ್ರುವ ನಾರಾಯಣ್, ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಬಸವರಾಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ವಿಜಯ್ ಕುಮಾರ್ ನಂಜನಗೂಡು ಉಸ್ತುವಾರಿ ಶ್ರೀಕಂಠ, ಕೆಪಿಸಿಸಿ ಕಾರ್ಯದರ್ಶಿ ಕಾವೇರಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶಂಕರ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು