2:15 AM Friday9 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಮಾಜಿ ಸಂಸದ ದ್ರುವನಾರಾಯಣ್ ಸ್ಮರಣಾರ್ಥ ಆಶ್ರಯ ಚಾರಿಟೀಸ್ ವತಿಯಿಂದ ಬಡಬಗ್ಗರಿಗೆ ವಿವಿಧ ಸವಲತ್ತು ವಿತರಣೆ

29/10/2024, 19:02

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮಾಜಿ ಸಂಸದ ಆರ್ ಧ್ರುವನಾರಾಯಣ್ ಸ್ಮರಣಾರ್ಥ ಆಶ್ರಯ ಚಾರಿಟೀಸ್ ವತಿಯಿಂದ ಬಡಬಗ್ಗರು, ವಿಕಲಚೇತನರು ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ದರ್ಶನ್ ದ್ರುವ ನಾರಾಯಣ್ ಸೇರಿದಂತೆ ವೇದಿಕೆ ಮೇಲಿನ ಗಣ್ಯರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಸಕ ದರ್ಶನ್ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಆಶ್ರಯ ಚಾರಿಟೀಸ್ ಸಂಸ್ಥೆಯ ಸಂಸ್ಥಾಪಕರಾದ ಸಂಜಯ್ ಪಾಲ್ ಅವರು ವಿವಿಧ ಜನಪರ ಸೇವೆಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ನಮ್ಮ ತಂದೆಯವರ ಸ್ಮರಣಾರ್ಥ ಇಂದು ಬಡವರು ಹಿಂದುಳಿದವರು, ವಿಕಲಚೇತನರು ವಿದ್ಯಾರ್ಥಿಗಳು, ಪೌರಕಾರ್ಮಿಕರು, ಆಟೋ ಡ್ರೈವರ್ ಗಳು ಸೇರಿದಂತೆ ನೂರಾರು ಮಂದಿಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ವಿವಿಧ ಸವಲತ್ತುಗಳನ್ನು ನೀಡಿ ತಮ್ಮ ಸಾಮಾಜಿಕ ಕಳಕಳಿಯನ್ನು ಮೆರೆದಿದ್ದಾರೆ. ಇವರಿಗೆ ಇನ್ನಷ್ಟು ಜನಸೇವೆ ಮಾಡುವ ಶಕ್ತಿಯನ್ನು ಆ ದೇವರು ಕರುಣಿಸಲಿ ಎಂದು ಶುಭ ಹಾರೈಸಿದರು.
ಆಶ್ರಯ ಚಾರಿಟೀಸ್ ಸಂಸ್ಥಾಪಕ ಸಂಜಯ್ ಪಾಲ್ ಮಾತನಾಡಿ ಮಾಜಿ ಸಂಸದರಾದ ಆರ್ ಧ್ರುವನಾರಾಯಣ್ ಅವರು ಯಾವಾಗಲೂ ಬಡವರ ಹಿಂದುಳಿದವರ ದೀನ ದಲಿತರ ಏಳಿಗೆಗಾಗಿ ಶ್ರಮಿಸುತ್ತಿದ್ದರು. ಅವರ ಸ್ಮರಣಾರ್ಥ ಇಂದು ಅವರ ಪುತ್ರ ಶಾಸಕ ದರ್ಶನ್ ದ್ರುವನಾರಾಯಣ್ ನೇತೃತ್ವದಲ್ಲಿ ಬಡವರಿಗಾಗಿ ನನ್ನ ಕೈಲಾದ ಅಳಿಲು ಸೇವೆಯನ್ನು ಮಾಡುತ್ತಿದ್ದೇನೆ ಎಂದರು.


ಇದೇ ಸಂದರ್ಭ ವೇದಿಕೆ ಮೇಲಿನ ಗಣ್ಯರು ಅರ್ಹಫಲಾನುಭವಿಗಳಿಗೆ, ಸೀರೆ, ಬಟ್ಟೆ, ಸಮವಸ್ತ್ರ ಸ್ಕೂಲ್ ಬ್ಯಾಗ್, ವಿಕಲಚೇತನರಿಗೆ ವೀಲ್ ಚೇರ್, ಊರುಗೋಲು ಸೇರಿದಂತೆ ವಿವಿಧ ಸಲಕರಣೆಗಳನ್ನು ವಿತರಣೆ ಮಾಡಿದರು. ಇದೇ ಸಂದರ್ಭ ಬಂದ ಎಲ್ಲಾ ಫಲಾನುಭವಿಗಳು ಹಾಗೂ ಅತಿಥಿ ಗಣ್ಯರಿಗೆ ಊಟದ ವ್ಯವಸ್ಥೆಯನ್ನು ಸಹ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಮುಖಂಡರಾದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಹೇಶ್, ವಕೀಲ ರಾಚಪ್ಪ, ದೊರೆಸ್ವಾಮಿ ನಾಯಕ, ತಗಡೂರು ನಾಯಕ, ಸಂಸ್ಥೆಯ ಕಾರ್ಯದರ್ಶಿ ಭಾರ್ಗವ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು