9:56 PM Thursday16 - April 2026
ಬ್ರೇಕಿಂಗ್ ನ್ಯೂಸ್
ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ… ಕೋಡಪದವಿನಲ್ಲಿ ಚಿನ್ನದ ಸರ ಕದ್ದ ಪ್ರಕರಣಕ್ಕೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಫೋಟೋದ ವ್ಯಕ್ತಿಗೂ… Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ…

ಇತ್ತೀಚಿನ ಸುದ್ದಿ

ಮಾಜಿ ಸಂಸದ ದ್ರುವನಾರಾಯಣ್ ಸ್ಮರಣಾರ್ಥ ಆಶ್ರಯ ಚಾರಿಟೀಸ್ ವತಿಯಿಂದ ಬಡಬಗ್ಗರಿಗೆ ವಿವಿಧ ಸವಲತ್ತು ವಿತರಣೆ

29/10/2024, 19:02

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮಾಜಿ ಸಂಸದ ಆರ್ ಧ್ರುವನಾರಾಯಣ್ ಸ್ಮರಣಾರ್ಥ ಆಶ್ರಯ ಚಾರಿಟೀಸ್ ವತಿಯಿಂದ ಬಡಬಗ್ಗರು, ವಿಕಲಚೇತನರು ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ದರ್ಶನ್ ದ್ರುವ ನಾರಾಯಣ್ ಸೇರಿದಂತೆ ವೇದಿಕೆ ಮೇಲಿನ ಗಣ್ಯರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಸಕ ದರ್ಶನ್ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಆಶ್ರಯ ಚಾರಿಟೀಸ್ ಸಂಸ್ಥೆಯ ಸಂಸ್ಥಾಪಕರಾದ ಸಂಜಯ್ ಪಾಲ್ ಅವರು ವಿವಿಧ ಜನಪರ ಸೇವೆಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ನಮ್ಮ ತಂದೆಯವರ ಸ್ಮರಣಾರ್ಥ ಇಂದು ಬಡವರು ಹಿಂದುಳಿದವರು, ವಿಕಲಚೇತನರು ವಿದ್ಯಾರ್ಥಿಗಳು, ಪೌರಕಾರ್ಮಿಕರು, ಆಟೋ ಡ್ರೈವರ್ ಗಳು ಸೇರಿದಂತೆ ನೂರಾರು ಮಂದಿಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ವಿವಿಧ ಸವಲತ್ತುಗಳನ್ನು ನೀಡಿ ತಮ್ಮ ಸಾಮಾಜಿಕ ಕಳಕಳಿಯನ್ನು ಮೆರೆದಿದ್ದಾರೆ. ಇವರಿಗೆ ಇನ್ನಷ್ಟು ಜನಸೇವೆ ಮಾಡುವ ಶಕ್ತಿಯನ್ನು ಆ ದೇವರು ಕರುಣಿಸಲಿ ಎಂದು ಶುಭ ಹಾರೈಸಿದರು.
ಆಶ್ರಯ ಚಾರಿಟೀಸ್ ಸಂಸ್ಥಾಪಕ ಸಂಜಯ್ ಪಾಲ್ ಮಾತನಾಡಿ ಮಾಜಿ ಸಂಸದರಾದ ಆರ್ ಧ್ರುವನಾರಾಯಣ್ ಅವರು ಯಾವಾಗಲೂ ಬಡವರ ಹಿಂದುಳಿದವರ ದೀನ ದಲಿತರ ಏಳಿಗೆಗಾಗಿ ಶ್ರಮಿಸುತ್ತಿದ್ದರು. ಅವರ ಸ್ಮರಣಾರ್ಥ ಇಂದು ಅವರ ಪುತ್ರ ಶಾಸಕ ದರ್ಶನ್ ದ್ರುವನಾರಾಯಣ್ ನೇತೃತ್ವದಲ್ಲಿ ಬಡವರಿಗಾಗಿ ನನ್ನ ಕೈಲಾದ ಅಳಿಲು ಸೇವೆಯನ್ನು ಮಾಡುತ್ತಿದ್ದೇನೆ ಎಂದರು.


ಇದೇ ಸಂದರ್ಭ ವೇದಿಕೆ ಮೇಲಿನ ಗಣ್ಯರು ಅರ್ಹಫಲಾನುಭವಿಗಳಿಗೆ, ಸೀರೆ, ಬಟ್ಟೆ, ಸಮವಸ್ತ್ರ ಸ್ಕೂಲ್ ಬ್ಯಾಗ್, ವಿಕಲಚೇತನರಿಗೆ ವೀಲ್ ಚೇರ್, ಊರುಗೋಲು ಸೇರಿದಂತೆ ವಿವಿಧ ಸಲಕರಣೆಗಳನ್ನು ವಿತರಣೆ ಮಾಡಿದರು. ಇದೇ ಸಂದರ್ಭ ಬಂದ ಎಲ್ಲಾ ಫಲಾನುಭವಿಗಳು ಹಾಗೂ ಅತಿಥಿ ಗಣ್ಯರಿಗೆ ಊಟದ ವ್ಯವಸ್ಥೆಯನ್ನು ಸಹ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಮುಖಂಡರಾದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಹೇಶ್, ವಕೀಲ ರಾಚಪ್ಪ, ದೊರೆಸ್ವಾಮಿ ನಾಯಕ, ತಗಡೂರು ನಾಯಕ, ಸಂಸ್ಥೆಯ ಕಾರ್ಯದರ್ಶಿ ಭಾರ್ಗವ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು