11:39 PM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಮಾಜಿ ಸಂಸದ ದ್ರುವನಾರಾಯಣ್ ಸ್ಮರಣಾರ್ಥ ಆಶ್ರಯ ಚಾರಿಟೀಸ್ ವತಿಯಿಂದ ಬಡಬಗ್ಗರಿಗೆ ವಿವಿಧ ಸವಲತ್ತು ವಿತರಣೆ

29/10/2024, 19:02

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮಾಜಿ ಸಂಸದ ಆರ್ ಧ್ರುವನಾರಾಯಣ್ ಸ್ಮರಣಾರ್ಥ ಆಶ್ರಯ ಚಾರಿಟೀಸ್ ವತಿಯಿಂದ ಬಡಬಗ್ಗರು, ವಿಕಲಚೇತನರು ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ದರ್ಶನ್ ದ್ರುವ ನಾರಾಯಣ್ ಸೇರಿದಂತೆ ವೇದಿಕೆ ಮೇಲಿನ ಗಣ್ಯರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಸಕ ದರ್ಶನ್ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಆಶ್ರಯ ಚಾರಿಟೀಸ್ ಸಂಸ್ಥೆಯ ಸಂಸ್ಥಾಪಕರಾದ ಸಂಜಯ್ ಪಾಲ್ ಅವರು ವಿವಿಧ ಜನಪರ ಸೇವೆಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ನಮ್ಮ ತಂದೆಯವರ ಸ್ಮರಣಾರ್ಥ ಇಂದು ಬಡವರು ಹಿಂದುಳಿದವರು, ವಿಕಲಚೇತನರು ವಿದ್ಯಾರ್ಥಿಗಳು, ಪೌರಕಾರ್ಮಿಕರು, ಆಟೋ ಡ್ರೈವರ್ ಗಳು ಸೇರಿದಂತೆ ನೂರಾರು ಮಂದಿಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ವಿವಿಧ ಸವಲತ್ತುಗಳನ್ನು ನೀಡಿ ತಮ್ಮ ಸಾಮಾಜಿಕ ಕಳಕಳಿಯನ್ನು ಮೆರೆದಿದ್ದಾರೆ. ಇವರಿಗೆ ಇನ್ನಷ್ಟು ಜನಸೇವೆ ಮಾಡುವ ಶಕ್ತಿಯನ್ನು ಆ ದೇವರು ಕರುಣಿಸಲಿ ಎಂದು ಶುಭ ಹಾರೈಸಿದರು.
ಆಶ್ರಯ ಚಾರಿಟೀಸ್ ಸಂಸ್ಥಾಪಕ ಸಂಜಯ್ ಪಾಲ್ ಮಾತನಾಡಿ ಮಾಜಿ ಸಂಸದರಾದ ಆರ್ ಧ್ರುವನಾರಾಯಣ್ ಅವರು ಯಾವಾಗಲೂ ಬಡವರ ಹಿಂದುಳಿದವರ ದೀನ ದಲಿತರ ಏಳಿಗೆಗಾಗಿ ಶ್ರಮಿಸುತ್ತಿದ್ದರು. ಅವರ ಸ್ಮರಣಾರ್ಥ ಇಂದು ಅವರ ಪುತ್ರ ಶಾಸಕ ದರ್ಶನ್ ದ್ರುವನಾರಾಯಣ್ ನೇತೃತ್ವದಲ್ಲಿ ಬಡವರಿಗಾಗಿ ನನ್ನ ಕೈಲಾದ ಅಳಿಲು ಸೇವೆಯನ್ನು ಮಾಡುತ್ತಿದ್ದೇನೆ ಎಂದರು.


ಇದೇ ಸಂದರ್ಭ ವೇದಿಕೆ ಮೇಲಿನ ಗಣ್ಯರು ಅರ್ಹಫಲಾನುಭವಿಗಳಿಗೆ, ಸೀರೆ, ಬಟ್ಟೆ, ಸಮವಸ್ತ್ರ ಸ್ಕೂಲ್ ಬ್ಯಾಗ್, ವಿಕಲಚೇತನರಿಗೆ ವೀಲ್ ಚೇರ್, ಊರುಗೋಲು ಸೇರಿದಂತೆ ವಿವಿಧ ಸಲಕರಣೆಗಳನ್ನು ವಿತರಣೆ ಮಾಡಿದರು. ಇದೇ ಸಂದರ್ಭ ಬಂದ ಎಲ್ಲಾ ಫಲಾನುಭವಿಗಳು ಹಾಗೂ ಅತಿಥಿ ಗಣ್ಯರಿಗೆ ಊಟದ ವ್ಯವಸ್ಥೆಯನ್ನು ಸಹ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಮುಖಂಡರಾದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಹೇಶ್, ವಕೀಲ ರಾಚಪ್ಪ, ದೊರೆಸ್ವಾಮಿ ನಾಯಕ, ತಗಡೂರು ನಾಯಕ, ಸಂಸ್ಥೆಯ ಕಾರ್ಯದರ್ಶಿ ಭಾರ್ಗವ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು