3:48 AM Monday23 - February 2026
ಬ್ರೇಕಿಂಗ್ ನ್ಯೂಸ್
ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ…

ಇತ್ತೀಚಿನ ಸುದ್ದಿ

ಮಾಜಿ ಸಂಸದ ದ್ರುವನಾರಾಯಣ್ ಸ್ಮರಣಾರ್ಥ ಆಶ್ರಯ ಚಾರಿಟೀಸ್ ವತಿಯಿಂದ ಬಡಬಗ್ಗರಿಗೆ ವಿವಿಧ ಸವಲತ್ತು ವಿತರಣೆ

29/10/2024, 19:02

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮಾಜಿ ಸಂಸದ ಆರ್ ಧ್ರುವನಾರಾಯಣ್ ಸ್ಮರಣಾರ್ಥ ಆಶ್ರಯ ಚಾರಿಟೀಸ್ ವತಿಯಿಂದ ಬಡಬಗ್ಗರು, ವಿಕಲಚೇತನರು ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ದರ್ಶನ್ ದ್ರುವ ನಾರಾಯಣ್ ಸೇರಿದಂತೆ ವೇದಿಕೆ ಮೇಲಿನ ಗಣ್ಯರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಸಕ ದರ್ಶನ್ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಆಶ್ರಯ ಚಾರಿಟೀಸ್ ಸಂಸ್ಥೆಯ ಸಂಸ್ಥಾಪಕರಾದ ಸಂಜಯ್ ಪಾಲ್ ಅವರು ವಿವಿಧ ಜನಪರ ಸೇವೆಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ನಮ್ಮ ತಂದೆಯವರ ಸ್ಮರಣಾರ್ಥ ಇಂದು ಬಡವರು ಹಿಂದುಳಿದವರು, ವಿಕಲಚೇತನರು ವಿದ್ಯಾರ್ಥಿಗಳು, ಪೌರಕಾರ್ಮಿಕರು, ಆಟೋ ಡ್ರೈವರ್ ಗಳು ಸೇರಿದಂತೆ ನೂರಾರು ಮಂದಿಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ವಿವಿಧ ಸವಲತ್ತುಗಳನ್ನು ನೀಡಿ ತಮ್ಮ ಸಾಮಾಜಿಕ ಕಳಕಳಿಯನ್ನು ಮೆರೆದಿದ್ದಾರೆ. ಇವರಿಗೆ ಇನ್ನಷ್ಟು ಜನಸೇವೆ ಮಾಡುವ ಶಕ್ತಿಯನ್ನು ಆ ದೇವರು ಕರುಣಿಸಲಿ ಎಂದು ಶುಭ ಹಾರೈಸಿದರು.
ಆಶ್ರಯ ಚಾರಿಟೀಸ್ ಸಂಸ್ಥಾಪಕ ಸಂಜಯ್ ಪಾಲ್ ಮಾತನಾಡಿ ಮಾಜಿ ಸಂಸದರಾದ ಆರ್ ಧ್ರುವನಾರಾಯಣ್ ಅವರು ಯಾವಾಗಲೂ ಬಡವರ ಹಿಂದುಳಿದವರ ದೀನ ದಲಿತರ ಏಳಿಗೆಗಾಗಿ ಶ್ರಮಿಸುತ್ತಿದ್ದರು. ಅವರ ಸ್ಮರಣಾರ್ಥ ಇಂದು ಅವರ ಪುತ್ರ ಶಾಸಕ ದರ್ಶನ್ ದ್ರುವನಾರಾಯಣ್ ನೇತೃತ್ವದಲ್ಲಿ ಬಡವರಿಗಾಗಿ ನನ್ನ ಕೈಲಾದ ಅಳಿಲು ಸೇವೆಯನ್ನು ಮಾಡುತ್ತಿದ್ದೇನೆ ಎಂದರು.


ಇದೇ ಸಂದರ್ಭ ವೇದಿಕೆ ಮೇಲಿನ ಗಣ್ಯರು ಅರ್ಹಫಲಾನುಭವಿಗಳಿಗೆ, ಸೀರೆ, ಬಟ್ಟೆ, ಸಮವಸ್ತ್ರ ಸ್ಕೂಲ್ ಬ್ಯಾಗ್, ವಿಕಲಚೇತನರಿಗೆ ವೀಲ್ ಚೇರ್, ಊರುಗೋಲು ಸೇರಿದಂತೆ ವಿವಿಧ ಸಲಕರಣೆಗಳನ್ನು ವಿತರಣೆ ಮಾಡಿದರು. ಇದೇ ಸಂದರ್ಭ ಬಂದ ಎಲ್ಲಾ ಫಲಾನುಭವಿಗಳು ಹಾಗೂ ಅತಿಥಿ ಗಣ್ಯರಿಗೆ ಊಟದ ವ್ಯವಸ್ಥೆಯನ್ನು ಸಹ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಮುಖಂಡರಾದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಹೇಶ್, ವಕೀಲ ರಾಚಪ್ಪ, ದೊರೆಸ್ವಾಮಿ ನಾಯಕ, ತಗಡೂರು ನಾಯಕ, ಸಂಸ್ಥೆಯ ಕಾರ್ಯದರ್ಶಿ ಭಾರ್ಗವ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು