9:35 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಎಕ್ಸಾಂ ವಾರಿಯರ್ಸ್‌: ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಲು ಚಿತ್ರರಚನಾ ಸ್ಪರ್ಧೆ; ಪ್ರಧಾನಿ ಪ್ರೇರಣೆಯಿಂದ ಶಾಸಕ ವೇದವ್ಯಾಸ ಕಾಮತ್‌ ಆಯೋಜನೆ

27/01/2023, 22:14

ಮಂಗಳೂರು(reporterkarnataka.com): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಧ್ಯಾರ್ಥಿಗಳು ಪರೀಕ್ಷೆಯನ್ನು ಹೇಗೆ ಎದುರಿಸಬೇಕು ಎಂಬ ಪರಿಕಲ್ಪನೆಯಲ್ಲಿ ತರುಣ ಸಮುದಾಯಕ್ಕಾಗಿ ಬರೆದಿರುವ “ಎಕ್ಸಾಮ್ ವಾರಿಯರ್ಸ್” ಕೃತಿಯ ಅನುಸಾರ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಪೂರಕವಾಗಿ ಮಂಗಳೂರು ನಗರ ದಕ್ಷಿಣದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ವಿನೂತನವಾಗಿ ಚಿತ್ರ ಕಲಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು.

ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯು ಶಕ್ತಿನಗರ ಶಕ್ತಿ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಿತು. 9,10 ಹಾಗೂ ಪಿಯುಸಿ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಸ್ಪರ್ಧೆ ನಡೆಯಲಿದೆ‌. ಜಿಲ್ಲೆಯಿಂದ ಸರಿ ಸುಮಾರು 500ಕ್ಕೂ ಅಧಿಕ ವಿಧ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವ‌ ನಿರೀಕ್ಷೆಯಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಊಟ ಉಪಹಾರದ ವ್ಯವಸ್ಥೆ ಹಾಗೂ ಪ್ರಧಾನಿ ಅವರು ರಚಿಸಿದ ಎಕ್ಸಾಮ್ ವಾರಿಯರ್ಸ್ ಕೃತಿಯನ್ನು ಮತ್ತು ಪ್ರಮಾಣ ಪತ್ರವನ್ನು ನೀಡಲಾಗುತ್ತದೆ.
ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ವಿದ್ಯಾರ್ಥಿಗೆ ವಿಶೇಷವಾಗಿ ಟ್ರೋಫಿ ಹಾಗೂ 8 ಗ್ರಾಂ ಚಿನ್ನದ ಪದಕ, ದ್ವಿತೀಯ 6 ಗ್ರಾಂ ಚಿನ್ನದ ಪದಕ, ಹಾಗೂ ತೃತೀಯ 4 ಗ್ರಾಂ ಚಿನ್ನದ ಪದಕ ಹಾಗೂ ಟ್ರೋಫಿ ಬಹುಮಾನವಾಗಿ ನೀಡಲಾಗುವುದು. ಮಾತ್ರವಲ್ಲದೆ ಸಮಾಧಾನಕರ ಬಹುಮಾನವಾಗಿ 25 ಜನರಿಗೆ ಬೆಳ್ಳಿಯ ಪದಕ ಹಾಗೂ ಎಕ್ಸಾಂ ವಾರಿಯರ್ಸ್ ಪುಸ್ತಕ ನೀಡಲಾಗುತ್ತದೆ.

ಚಿತ್ರಕಲೆಯ ಕುರಿತು ಆಸಕ್ತರಾಗಿರುವ ಸಾರ್ವಜನಿಕರಿಗೂ ಕೂಡ ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಕಾಶವಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ.
ಸ್ಪರ್ಧೆಯ ಪ್ರಥಮ ಬಂಗಾರದ ಬಹುಮಾನವನ್ನು ಕೆ.ಎಸ್ ರಾವ್ ರೋಡ್ ಎಸ್.ಎಲ್ ಶೇಟ್ ಮಾಲಕರಾದ ಪ್ರಶಾಂತ್ ಶೇಟ್ ಹಾಗೂ ಸಹೋದರರು, ದ್ವಿತೀಯ ಬಹುಮಾನ ಬಂಗಾರದ ಪದಕ ಬಹುಮಾನವನ್ನು ಜೋಸ್ ಆಲುಕಾಸ್ ಬಂಗಾರದ ಮಳಿಗೆ, ತೃತೀಯ ಬಹುಮಾನದ ಚಿನ್ನದ ಪದಕವನ್ನು ಲೇಡಿಹಿಲ್ ಎಸ್.ಎಲ್ ಶೇಟ್ ಬಂಗಾರದ ಮಳಿಗೆಯ ರವೀಂದ್ರ ಪೈ ಹಾಗೂ ಮಕ್ಕಳು, 25 ಬೆಳ್ಳಿಯ ಪದಕವನ್ನು ಕದ್ರಿ‌ ಸ್ವರ್ಣ ಜ್ಯುವೆಲ್ಲರಿ ನೀಡುತ್ತಿದ್ದಾರೆ.

ಮಕ್ಕಳಲ್ಲಿ ಮನೋಬಲ ಹೆಚ್ಚಿಸುವ ಪ್ರಯತ್ನ:
ಪರೀಕ್ಷೆಗಳನ್ನು ಎದುರಿಸುವ ವಿದ್ಯಾರ್ಥಿಗಳಲ್ಲಿ ಮನೋಬಲ ಹೆಚ್ಚಿಸಿ, ಆತ್ಮಸ್ಥೈರ್ಯ ತುಂಬಲು ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರ ‘ಎಕ್ಸಾಂ ವಾರಿಯರ್ಸ್‌’ ಕೃತಿಯಲ್ಲಿ ನೀಡಿರುವವ ಸಲಹೆಗಳಂತೆ ನಾವೂ ಸಹ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಿದ್ದೇವೆ. ಪರೀಕ್ಷೆಯ ಒತ್ತಡವನ್ನು ಕಡಿಮೆ ಮಾಡುವುದರ ಜತೆಗೆ ವಿನೂತನವಾದ ಯೋಚನೆಗಳನ್ನು ಮಕ್ಕಳಲ್ಲಿ ಮೂಡಿಸುವ ಸಲುವಾಗಿ ಸೃಜನಶೀಲವಾದ ಚಿತ್ರಗಳ ರಚನೆಗೆ ಪ್ರೋತ್ಸಾಹಿಸುತ್ತಿದ್ದೇವೆ. ಈ ಸರಣಿಯಲ್ಲಿ ಮೊದಲ ಕಾರ್ಯಕ್ರಮವನ್ನು ಇಂದು ಯಶಸ್ವಿಯಾಗಿ ಆಯೋಜಿಸಿದ್ದೇವೆ ಎಂದು ಕಾಮತ್‌ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು