2:16 AM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಕನ್ನಡಿಗರ ಮೇಲೆ ಪುಂಡಾಟಿಕೆ ಮಾಡುವವರನ್ನು ಗಡಿಪಾರು ಮಾಡಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

24/02/2025, 22:06

ಹಾವೇರಿ(reporterkarnataka.com): ಕನ್ನಡಿಗರ ಮೇಲೆ ಪುಂಡಾಟಿಕೆ ಮಾಡುವವರನ್ನು ಮೊದಲು ಸರಕಾರ ಒದ್ದು ಹೊರಗೆ ಹಾಕಬೇಕು. ಕನ್ನಡಿಗರಿಗೆ ಅವಮಾನ ಮಾಡುವವರ ಮೇಲೆ ಸರಕಾರ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ‌ಮಾತನಾಡಿದ ಅವರು,
ದಿಟ್ಟವಾಗಿ ಕನ್ನಡ ಮಾತನಾಡುತ್ತೇನೆ ಎಂದ ಕಂಡಕ್ಟರ್ ಗೆ ಅಭಿನಂದನೆ. ಕನ್ನಡಿಗರ ಮೇಲೆ ಪುಂಡಾಟಿಕೆ ಮಾಡುವವರನ್ನು ಮೊದಲು ಸರಕಾರ ಒದ್ದು ಹೊರಗೆ ಹಾಕಬೇಕು. ಕಂಡಕ್ಟರ್ ಮೇಲಿನ ಫೋಕ್ಸೋ ಕೇಸ್ ನ್ನು ಕೂಡಲೇ ಹಿಂಪಡೆಯಬೇಕು ಈ ಘಟನೆಯ ಬಗ್ಗೆ ಮಂತ್ರಿಗಳು ಮೃದುವಾಗಿ ಮಾತನಾಡುತ್ತಾರೆ. ಮಂತ್ರಿಗಳು ಎಲ್ಲೋ ಮರಾಠಿ ಮಾತನಾಡುವವರ ಮುಲಾಜಿಗೆ ಬಿದ್ದಿದ್ದಾರೆ. ಕನ್ನಡ ಚಳುವಳಿಗಾರರ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದ್ದಾರೆ.
ಕೂಡಲೇ ಸರಕಾರ ಮಹಾರಾಷ್ಟ್ರ ಸರಕಾರದ ಜೊತೆ ಮಾತನಾಡಬೇಕು, ಪುಂಡರಿಗೆ ಎಚ್ಚರಿಕೆ ಕೊಡಬೇಕು. ಕನ್ನಡಿಗರಿಗೆ ಅವಮಾನ ಮಾಡುವವರ ಮೇಲೆ ಸರಕಾರ ಬಿಗಿ ಕ್ರಮ ಕೈಗೊಳ್ಳಬೇಕು. ಇಲ್ಲಿಯ ಅನ್ನ ತಿಂದು, ನೀರು ಕುಡಿದು ನಾಲಾಯಕ್ ಅನ್ನುವ ಪದ ಬಳಕೆ ಮಾಡುವುದು ಸರಿಯಲ್ಲ
ಕೂಡಲೇ ಇಂಥವರನ್ನು ಗಡಿಪಾರು ಮಾಡಬೇಕು. ಹಿಂದೆ ನಮ್ಮ ಸರಕಾರ ಇದ್ದಾಗ ಇಂಥದ್ದೇ ಒಂದು ಪ್ರಕರಣ ನಡೆದಿತ್ತು, ಆಗ ನಮ್ಮ ಸರಕಾರ ಕಠಿಣ ಕ್ರಮ ಕೈಗೊಂಡಿತ್ತು ಎಂದು ಹೇಳಿದರು.
ಎಸ್ಸಿಪಿ ಟಿಎಸ್ ಪಿ ಹಣ ಬೇರೆ ಉದ್ದೇಶಕ್ಕೆ ಬಳಸಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಸರಕಾರ. ಎಸ್ಸಿ ಎಸ್ಟಿ ಸಮಾಜಕ್ಕೆ ಅನ್ಯಾಯ ಮಾಡುತ್ತಿದೆ. ಎಸ್ಸಿಪಿ, ಟಿಎಸ್ಪಿ ಹಣವನ್ನೆ ಗ್ಯಾರಂಟಿಗಳಿಗೆ ಬಳಕೆ ಮಾಡಿದ್ದಾರೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವವರು ಮೊದಲು ಅಂತಹ ಸಮಾಜಗಳಿಗೆ ಹಣ ಬಿಡುಗಡೆ ಮಾಡಲಿ. ಎಸ್ ಸಿ ಎಸ್ ಟಿ ನಿಗಮಗಳಿಗೆ ಮೊದಲೇ ಕಡಿಮೆ ಹಣ ನಿಗದಿ ಮಾಡಿದ್ದಾರೆ, ಅದರಲ್ಲಿ ಈವರೆಗೆ ಕೇವಲ 25% ಮಾತ್ರ ಬಿಡುಗಡೆ ಮಾಡಿದ್ದಾರೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು