10:14 PM Tuesday1 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ… Chikkamagaluru | ಕೆಮ್ಮಣ್ಣುಗುಂಡಿ ಸಮೀಪ ವಿದ್ಯುತ್ ಶಾಕ್ ನಿಂದ ಕಾಡಾನೆ ದಾರುಣ ಸಾವು ಕೂಡ್ಲಿಗಿ: ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಭಾಗಿ ಭಾಗಿ Kolara | ಶ್ರೀನಿವಾಸಪುರದಲ್ಲಿ ಸಂಭ್ರಮ- ಸಡಗರದಲ್ಲಿ ಈದ್-ಉಲ್-ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ… Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ… MSIL | ಸರಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಇ ಪೋರ್ಟಲ್‌

ಇತ್ತೀಚಿನ ಸುದ್ದಿ

ಡಿ.29, 30ರಂದು ಎಕ್ಸ್‌ಪರ್ಟ್ ಕಾಲೇಜು ದಿನಾಚರಣೆ ಮತ್ತು ಟೈಂ ಸ್ಕ್ವೇರ್ ‌ ಮ್ಯೂಸಿಕ್ ಫೆಸ್ಟಿವಲ್-24

28/12/2024, 14:38

ಮಂಗಳೂರು(reporterkarnataka.com): ಡಿ.29ರಂದು ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜಿನ 39ನೇ ಎಕ್ಸ್‌ಪರ್ಟ್ ಕಾಲೇಜು ದಿನಾಚರಣೆ ಮತ್ತು ಡಿ.30ರಂದು ಟೈಂ ಸ್ಕ್ವೇರ್‌ ಮ್ಯೂಸಿಕ್‌ ಫೆಸ್ಟಿವಲ್-2024 ಜರುಗಲಿದೆ ಎಂದು ಕಾಲೇಜು ಪ್ರಾಂಶುಪಾಲ ಡಾ.ಎನ್.ಕೆ.ವಿಜಯನ್ ಹೇಳಿದ್ದಾರೆ.
ನಗರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಡಿ.29ರಂದು ಬೆಳಿಗ್ಗೆ 8:35ಕ್ಕೆ ಎಕ್ಸ್‌ಪರ್ಟ್ ದಿನಾಚರಣೆಗಳ ಅಂಗವಾಗಿ ಧ್ವಜಾರೋಹಣ ನಡೆಯಲಿದೆ. ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್‌.ಎನ್‌. ಮುಖ್ಯ ಅತಿಥಿಯಾಗಿ ಭಾಗವಹಿಸುವರು. 11:30ಕ್ಕೆ ಬಹುಮಾನ ವಿತರಣೆ
ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯವಾದಿ ಎ.ಅಮೃತ್ ಕಿಣಿ ಭಾಗವಹಿಸುವರು.
ಸಂಜೆ 5:20ಕ್ಕೆ ನಡೆಯುವ ಎಕ್ಸ್‌ ಪರ್ಟ್ ದಿನಾಚರಣೆ ಸಮಾರಂಭವನ್ನು ಮನಿಲಾದ ಏಷಿಯನ್ ಡೆವಲಪ್‌ಮೆಂಟ್‌ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕರ ಹಿರಿಯ ಸಲಹೆಗಾರರಾದ ಪೊನ್ನುರಾಜ್ ಅವರು ಉದ್ಘಾಟಿಸುವರು.
ಯೇನೆಪೋಯ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಯೇನೆಪೋಯ ಅಬ್ದುಲ್ ಕುಂಞ ಗೌರವ ಅತಿಥಿಯಾಗಿ ಭಾಗವಹಿಸುವರು. ಎಕ್ಸ್‌ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ.ನರೇಂದ್ರ ಎಲ್‌. ನಾಯಕ್
ಅಧ್ಯಕ್ಷತೆ ವಹಿಸಲಿದ್ದಾರೆ. ಎಕ್ಸ್‌ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷೆ ಡಾ.ಉಷಾಪ್ರಭಾ ಎನ್. ನಾಯಕ್‌
ಪ್ರಾಸ್ತಾವಿಕ ಭಾಷಣ ಮಾಡುವರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದರು.
*ಶಿವ ಮ್ಯೂಷನ್ ಸಂಗೀತೋತ್ಸವ:*
ಡಿ.30ರಂದು ಸಂಜೆ ನಡೆಯುವ ಅಂತಾರಾಷ್ಟ್ರೀಯ ಖ್ಯಾತಿಯ ಸಂಗೀತ ಕಲಾವಿದರನ್ನೊಳಗೊಂಡ ‘ಶಿವ’ ತಂಡದ
ಅಮೋಘ ಪ್ಯೂಷನ್ ಸಂಗೀತೋತ್ಸವವನ್ನು ಖ್ಯಾತ ದಾಸ ಸಾಹಿತ್ಯ, ಗಾಯಕ ಡಾ.ವಿದ್ಯಾಭೂಷಣ ಅವರು ಉದ್ಘಾಟಿಸುವರು.
ಖ್ಯಾತ ಸಿತಾರ್ ಕಲಾವಿದರಾದ ಉಸ್ತಾದ್ ರಫೀಕ್ ಖಾನ್ ಮತ್ತು ಅವರ ಶಿಷ್ಯ ಅಂಕುಶ್ ಎನ್. ನಾಯಕ್ ನೇತೃತ್ವದಲ್ಲಿ ನಡೆಯುವ ಸಂಗೀತ ಕಾರ್ಯಕ್ರಮದಲ್ಲಿ ಪಂ.ಪ್ರವೀಣ್‌ ಡಿ. ರಾವ್(ಕೀಬೋರ್ಡ್), ವಿದ್ವಾನ್ ಬಿ.ಸಿ. ಮಂಜುನಾಥ್‌(ಮೃದಂಗ), ಮಂಜುನಾಥ್ ಸತ್ಯಶೀಲ್(ಡ್ರಮ್ಸ್), ವಿನಯ್ ಶರ್ವ(ಗಾಯನ), ರಾಜೇಶ್
ಭಾಗವತ್ (ತಬ್ಲಾ ಮತ್ತು ಪರ್ಕ್ಯುಶನ್), ಪಿ.ಕೆ.ಸಂತೋಷ್ (ಘಟಂ), ರಸ್ಸೆಲ್ ರಾಡ್ರಿಗಸ್ (ಬಾಸ್ ಗಿಟಾರ್) ಸಾಥ್
ನೀಡುವರು. ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸುವ ಆಸಕ್ತರು ಉಚಿತ ಪಾಸ್‌ಗಾಗಿ ಕೊಡಿಯಾಲ್‌ಬೈಲ್ ಎಕ್ಸ್‌ಪರ್ಟ್ ಕಾಲೇಜಿನ ಕಚೇರಿ(9916885919) ಅಥವಾ ವಳಚ್ಚಿಲ್‌ ಎಕ್ಸ್‌ಪರ್ಟ್ ಕಾಲೇಜು ಕಚೇರಿ(9844982004)ಯನ್ನು
ಸಂಪರ್ಕಿಸಬಹುದು ಎಂದು ಕಾಲೇಜು ಉಪ ಪ್ರಾಂಶುಪಾಲರಾದ ಸುಬ್ರಹ್ಮಣ್ಯ ಉಡುಪ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸಹಾಯಕ ಕಾರ್ಯಕ್ರಮ ನಿರ್ದೇಶಕಿ ಧೃತಿ ಬಿ. ಹೆಗ್ಡೆ, ಮಾಧ್ಯಮ ಸಂಯೋಜಕರಾದ ಸುರೇಶ್‌ ಎಡನಾಡು ಮತ್ತು ಕರುಣಾಕರ ಬಳ್ಳೂರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು