7:06 PM Thursday20 - August 2026
ಬ್ರೇಕಿಂಗ್ ನ್ಯೂಸ್
ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ

ಇತ್ತೀಚಿನ ಸುದ್ದಿ

ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ

20/08/2026, 19:06

ಚಾಮರಾಜನಗರ(reporterkarnataka.com): ಜಿಲ್ಲೆಯ ಹನೂರು ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ ಸಂಬಂಧ ಬಗೆದಷ್ಟೂ ಅಚ್ಚರಿಯ ವಿಚಾರಗಳು ಬಯಲಾಗುತ್ತಿವೆ.
ಆಗಸ್ಟ್​​ 14ರ ರಾತ್ರಿ ತಾಂಮ್ರಿಪಲ್ಲಿ ಕಳ್ಳಬೇಟೆ ತಡೆ ಶಿಬಿರದ ಬಳಿ ಫೈರಿಂಗ್​​ ಆಗಿದ್ದು, ಕಾವೇರಿ ವನ್ಯಧಾಮದಲ್ಲಿ ಗುಂಡಿನ ಸದ್ದು ಮೊಳಗಿದೆ ಎಂಬ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗಾರ್ಡ್​​ ಮಾಹಿತಿ ನೀಡಿದ್ದ ಎಂಬುದು ಗೊತ್ತಾಗಿದೆ.

*ಘಟನೆ ನಡೆದ ದಿನ ಆಗಿದ್ದೇನು?:*
ಹೀಗಾಗಿ ಆಗಸ್ಟ್​​ 15ರಂದು ಬೇಟೆಗಾರರು ಮತ್ತು ಕಾಡಿನಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಅಧಿಕಾರಿಗಳು ಹೆಚ್ಚಿನ ನಿಗಾ ಇಟ್ಟಿದ್ದರು. ಆ ದಿನಂದೇ ನಾಲ್ವರು ಬೇಟೆಯಾಡಲೆಂದು ಕಾಡಿಗೆ ತೆರಳಿದ್ದರು. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಅಧಿಕಾರಿಗಳು ಧ್ವಜಾರೋಹಣಕ್ಕೆ ತೆರಳಿರುತ್ತಾರೆ ಎಂದು ಇವರು ಭಾವಿಸಿದ್ದರು. ಆದರೆ ಅಂದು ಅರಣ್ಯ ಇಲಾಖೆ ಸಿಬ್ಬಂದಿ ಕಳ್ಳಬೇಟೆ ತಡೆ ಶಿಬಿರದಲ್ಲಿಯೇ ಇದ್ದರು. ಈ ವೇಳೆ ಬೇಟೆಗಾರರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ ಎನ್ನಲಾಗಿದೆ.ಮೃತರ ಪೈಕಿ ಓರ್ವನ ಮೇಲಿವೆ ಕೆಲ ಪ್ರಕರಣ
ಘಟನೆ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳನ್ನೇ ಟಾರ್ಗೆಟ್​​ ಮಾಡಿ, ಮೃತರ ಕಡೆಯವರು ಇಲಾಖಾ ಕ್ಯಾಂಪ್​​ಗಳನ್ನು ಸ್ಫೋಟಗೊಳಿಸಿದ್ದಾರೆ. ಮಿಂಚಿನಹಳ್ಳಿ , ಭೀಮೇಶ್ವರಿ, ಒಳ್ಳೆಮರದ ಹಟ್ಟಿ, ಬೂದಿಕೆರೆ, ಬಂಡಹಳ್ಳಿ ಮತ್ತು ಕಲಿದೊಡ್ಡಿ ಸೇರಿದಂತೆ ಒಟ್ಟು 6 ಕಡೆ ಕಳ್ಳಬೇಟೆ ತಡೆ ಶಿಬಿರಗಳ ದಾಳಿ ನಡೆಸಲಾಗಿದೆ. ಇನ್ನು ಗುಂಡಿನ ದಾಳಿ ವೇಳೆ ಮೃತಪಟ್ಟಿರುವ ಮೂವರ ಪೈಕಿ ಪೀಟರ್​​ ಮೇಲೆ ಬೇರೆ ಪ್ರಕರಣಗಳಲ್ಲಿ ಭಾಗಿಯಾದ ಆರೋಪಗಳಿದ್ದು, ಆತನಿಗಾಗಿ ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ಚರ್ಚ್​​ಗಳಲ್ಲಿ ಆತ 3 ತಿಂಗಳು ಅಡಗಿ ಕುಳಿತಿದ್ದ ಎಂಬ ಮಾಹಿತಿಯೂ ಸಿಕ್ಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು