9:11 AM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಫಹಲ್ಗಾಮ್ ಘಟನೆ ಮಾನವ ಕುಲಕ್ಕೆ ಮಾರಕ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

23/04/2025, 21:05

ಮಂಗಳೂರು(reporterkarnataka.com): ಕಾಶ್ಮೀರದ ಫಹಲ್ಗಾಮ್‌ನಲ್ಲಿ ಉಗ್ರವಾದಿಗಳಿಂದ ನಡೆದ ಪ್ರವಾಸಿಗರ ಹತ್ಯೆಯ ಹೃದಯ ವಿದ್ರಾವಕ ಘಟನೆ ಇಡೀ ಮಾನವ ಕುಲಕೆ ಮಾರಕ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ
ಪದ್ಮರಾಜ್ ಆರ್. ಪೂಜಾರಿ ಪ್ರತಿಕ್ರಿಯಿಸಿದ್ದಾರೆ.
ನ್ಯಾಯ, ನೀತಿ ಮತ್ತು ಶಾಂತಿ ಬಯಸುವ ಸವಾಜದಲ್ಲಿ ಹಿಂಸೆಗೆ ಸ್ಥಾನ ಇರಬಾರದು. ಪ್ರತಿಯೊಂದು ಜೀವವೂ ಅಮೂಲ್ಯವಾಗಿದ್ದು, ಜೀವ ನಷ್ಟವು ನಮ್ಮ ಸಾಮೂಹಿಕ ಆತ್ಮಸಾಕ್ಷಿಗೆ ಆದ ಗಾಯ. ಅಮಾಯಕರ ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಅವಾಯಕರ ಜೀವಗಳನ್ನು ಬಲಿಯಾಗಿಸಿ, ಅನೇಕ ಕುಟುಂಬಗಳನ್ನೇ ನಾಶ ಮಾಡಿರುವುದು ಹಿಂಸಾಚಾರವಷ್ಟೇ ಅಲ್ಲ. ಸಂಪೂರ್ಣ ಅವಾನವೀಯ ಕೃತ್ಯ. ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ಕೆಟ್ಟ ಬೆಳವಣಿಗೆ. ಈ ವಿಚಾರದಲ್ಲಿ ನಾವು ಪಕ್ಷ ಭೇದ ಮರೆತು ಕೇಂದ್ರ ಸರ್ಕಾರದ ಪರ ನಿಲ್ಲುತ್ತೇವೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂಬಂಧಿಸಿದರೂ ಅವುಗಳನ್ನು ಬುಡಸಮೇತ ಕಿತ್ತೊಗೆಯುವ ಕೆಲಸವಾಗಬೇಕು. ಅಮಾಯಕರನ್ನು ಕೊಂದ ಉಗ್ರರಿಗೆ ಕೇಂದ್ರ ಸರ್ಕಾರ ತಕ್ಕ ಉತ್ತರ ನೀಡಬೇಕು. ಮತ್ತು ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು. ಎಂದು ಈ ಮೂಲಕ ಆಗ್ರಹಿಸುತ್ತೇನೆ. ದುರ್ಘಟನೆಯಲ್ಲಿ ಮೃತರ ಕುಟುಂಬಗಳಿಗೆ ದುಃಖ ಸಹಿಸುವ ಶಕ್ತಿ ಸಿಗಲಿ. ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ಪದ್ಮರಾಜ್ ಪೂಜಾರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು