3:11 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ ಪ್ರಕರಣ: 4 ಮಂದಿ ವಿರುದ್ಧ ಎಫ್ ಐಆರ್ ದಾಖಲು

18/12/2021, 09:48

ಮೈಸೂರು(reporterkarnataka.com):

ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಹೊಸಹುಂಡಿ ಗ್ರಾಮದಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ ಪ್ರಕರಣಕ್ಕೆ ಸಂಬoಧಿಸಿದoತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮೈಮುಲ್ ಅಧ್ಯಕ್ಷ ಪ್ರಸನ್ನ ಅವರು ಮೈಮುಲ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ನಕಲಿ ನಂದಿನಿ ತಪ್ಪ ತಯಾರಿಸುತ್ತಿದ್ದ ಪ್ರಕರಣದ ಬಗ್ಗೆ ನೇರವಾಗಿ ಎಸ್ಪಿಗೆ ದೂರು ನೀಡಿದ್ದೇನೆ. ಪ್ರಕರಣ ಸಂಬoಧ ಮುರುಗೇಶ್, ಅಶ್ವಿನಿ, ಸಂತೋಷ್, ಕುಮಾರ್ ಎಂಬುವವರ ಮೇಲೆ ಎಫ್‌ಐಆರ್ ಆಗಿದೆ.

ಮೈಸೂರಿನ ಹೊರವಲಯದ ಹೊಸಹುಂಡಿಯಲ್ಲಿ ನಕಲಿ ತುಪ್ಪ ತಯಾರಿಕೆ ಕಂಡು ಬಂದಿದೆ. ಅಲ್ಲಿಗೂ ನಾವು ಭೇಟಿ ನೀಡಿ, ನಕಲಿ ತುಪ್ಪ ತಯಾರಿಕೆ ಘಟಕವನ್ನ ಸೀಜ್ ಮಾಡಿಸಿದ್ದೇವೆ. ಇದೇ ಮೊದಲು ಈ ಇಂತಹ ಕಲಬೆರಕೆ ಜಾಲ ಕಂಡು ಬಂದಿರೋದು. ಸರ್ಕಾರದ ಮಟ್ಟದಲ್ಲಿ ತನಿಖೆಗೆ ಮನವಿ ಮಾಡಿದ್ದೇವೆ. ಗೋದಾಮಿನಲ್ಲಿ ಸಿಕ್ಕಂತಹ ಎಲ್ಲಾ ನಕಲಿ ವಸ್ತುಗಳನ್ನ ಸೀಜ್ ಮಾಡುವಂತಹ ಕೆಲಸವಾಗಿದೆ. ಫುಡ್ ಡಿಪಾರ್ಟ್ಮೆಂಟ್‌ಗೂ ಮಾದರಿಯನ್ನ ಕಳುಹಿಸಲಾಗಿದೆ. ಮೇಲ್ನೋಟಕ್ಕೆ ಡಾಲ್ಡಾ, ಪಾಮ್ ಆಯಿಲ್ ನಂತಹ ವಸ್ತುಗಳನ್ನು ಬಳಸಿದ್ದಾರೆ. ಇಲ್ಲಿ ತಯಾರಾದ ನಕಲಿ ತುಪ್ಪ ಎಲ್ಲೆಲ್ಲಿ ಪೂರೈಕೆಯಾಗುತ್ತಿತ್ತು. ಯಾರೆಲ್ಲಾ ಇದರಲ್ಲಿ ಭಾಗಿಯಾಗಿದ್ದಾರೆ ಎನ್ನುವುದರ ತನಿಖೆಯಾಗುತ್ತಿದೆ. ಯಾರೇ ಪ್ರಭಾವಿಗಳಿದ್ದರೂ ಬಿಡಲ್ಲ, ಜೈಲಿಗೆ ಕಳುಹಿಸುತ್ತೇವೆ. ಮೈಮುಲ್ ಸಿಬ್ಬಂದಿ ಭಾಗಿಯಾಗಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಂಡು, ಅವರನ್ನು ಸೇವೆಯಿಂದಲೇ ವಜಾ ಮಾಡುತ್ತೇವೆ. ಅಲ್ಲದೇ ಜೈಲಿಗೂ ಕಳುಹಿಸುತ್ತೇವೆ ಎಂದು ಗುಡುಗಿದರು.

ಇಂತಹ ಅಕ್ರಮಗಳನ್ನ ತಡೆಯಲು ವಿಜುಲಿಯನ್ಸ್ ಟೀಂ ಚುರುಕುಗೊಳಿಸುತ್ತೇವೆ ಎಂದರು

ಪ್ರತಿ ವಾರಕ್ಕೊಮ್ಮೆ ಎಲ್ಲಾ ಮಿಲ್ಕ್ ಪಾರ್ಲರ್‌ಗಳಿಗೆ ಭೇಟಿ ಕೊಟ್ಟು ಪರಿಶೀಲಿಸಬೇಕು. ಗುಣಮಟ್ಟ ಕಾಯ್ದುಕೊಳ್ಳಲು ಬಗ್ಗೆ ಪ್ರತಿ ವಾರ ಉತ್ಪನ್ನಗಳನ್ನ ಲ್ಯಾಬ್‌ಗೆ ತಂದು ಪರಿಶೀಲಿಸುತ್ತೇವೆ. ಕೂಲಂಕುಶವಾಗಿ ತನಿಖೆ ನಡೆಸಿ, ಸತ್ಯಾಸತ್ಯತೆ ಹೊರ ತರುವಂತೆ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ರೈತರು, ಗ್ರಾಹಕರು ಮೈಮುಲ್ ಗೆ ಎರಡು ಕಣ್ಣುಗಳಿದ್ದಂತೆ. ಇಬ್ಬರ ವಿಶ್ವಾಸವನ್ನ ಮೈಮುಲ್ ಕಾಪಾಡಿಕೊಳ್ಳಲಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು