7:01 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ ಪ್ರಕರಣ: 4 ಮಂದಿ ವಿರುದ್ಧ ಎಫ್ ಐಆರ್ ದಾಖಲು

18/12/2021, 09:48

ಮೈಸೂರು(reporterkarnataka.com):

ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಹೊಸಹುಂಡಿ ಗ್ರಾಮದಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ ಪ್ರಕರಣಕ್ಕೆ ಸಂಬoಧಿಸಿದoತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮೈಮುಲ್ ಅಧ್ಯಕ್ಷ ಪ್ರಸನ್ನ ಅವರು ಮೈಮುಲ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ನಕಲಿ ನಂದಿನಿ ತಪ್ಪ ತಯಾರಿಸುತ್ತಿದ್ದ ಪ್ರಕರಣದ ಬಗ್ಗೆ ನೇರವಾಗಿ ಎಸ್ಪಿಗೆ ದೂರು ನೀಡಿದ್ದೇನೆ. ಪ್ರಕರಣ ಸಂಬoಧ ಮುರುಗೇಶ್, ಅಶ್ವಿನಿ, ಸಂತೋಷ್, ಕುಮಾರ್ ಎಂಬುವವರ ಮೇಲೆ ಎಫ್‌ಐಆರ್ ಆಗಿದೆ.

ಮೈಸೂರಿನ ಹೊರವಲಯದ ಹೊಸಹುಂಡಿಯಲ್ಲಿ ನಕಲಿ ತುಪ್ಪ ತಯಾರಿಕೆ ಕಂಡು ಬಂದಿದೆ. ಅಲ್ಲಿಗೂ ನಾವು ಭೇಟಿ ನೀಡಿ, ನಕಲಿ ತುಪ್ಪ ತಯಾರಿಕೆ ಘಟಕವನ್ನ ಸೀಜ್ ಮಾಡಿಸಿದ್ದೇವೆ. ಇದೇ ಮೊದಲು ಈ ಇಂತಹ ಕಲಬೆರಕೆ ಜಾಲ ಕಂಡು ಬಂದಿರೋದು. ಸರ್ಕಾರದ ಮಟ್ಟದಲ್ಲಿ ತನಿಖೆಗೆ ಮನವಿ ಮಾಡಿದ್ದೇವೆ. ಗೋದಾಮಿನಲ್ಲಿ ಸಿಕ್ಕಂತಹ ಎಲ್ಲಾ ನಕಲಿ ವಸ್ತುಗಳನ್ನ ಸೀಜ್ ಮಾಡುವಂತಹ ಕೆಲಸವಾಗಿದೆ. ಫುಡ್ ಡಿಪಾರ್ಟ್ಮೆಂಟ್‌ಗೂ ಮಾದರಿಯನ್ನ ಕಳುಹಿಸಲಾಗಿದೆ. ಮೇಲ್ನೋಟಕ್ಕೆ ಡಾಲ್ಡಾ, ಪಾಮ್ ಆಯಿಲ್ ನಂತಹ ವಸ್ತುಗಳನ್ನು ಬಳಸಿದ್ದಾರೆ. ಇಲ್ಲಿ ತಯಾರಾದ ನಕಲಿ ತುಪ್ಪ ಎಲ್ಲೆಲ್ಲಿ ಪೂರೈಕೆಯಾಗುತ್ತಿತ್ತು. ಯಾರೆಲ್ಲಾ ಇದರಲ್ಲಿ ಭಾಗಿಯಾಗಿದ್ದಾರೆ ಎನ್ನುವುದರ ತನಿಖೆಯಾಗುತ್ತಿದೆ. ಯಾರೇ ಪ್ರಭಾವಿಗಳಿದ್ದರೂ ಬಿಡಲ್ಲ, ಜೈಲಿಗೆ ಕಳುಹಿಸುತ್ತೇವೆ. ಮೈಮುಲ್ ಸಿಬ್ಬಂದಿ ಭಾಗಿಯಾಗಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಂಡು, ಅವರನ್ನು ಸೇವೆಯಿಂದಲೇ ವಜಾ ಮಾಡುತ್ತೇವೆ. ಅಲ್ಲದೇ ಜೈಲಿಗೂ ಕಳುಹಿಸುತ್ತೇವೆ ಎಂದು ಗುಡುಗಿದರು.

ಇಂತಹ ಅಕ್ರಮಗಳನ್ನ ತಡೆಯಲು ವಿಜುಲಿಯನ್ಸ್ ಟೀಂ ಚುರುಕುಗೊಳಿಸುತ್ತೇವೆ ಎಂದರು

ಪ್ರತಿ ವಾರಕ್ಕೊಮ್ಮೆ ಎಲ್ಲಾ ಮಿಲ್ಕ್ ಪಾರ್ಲರ್‌ಗಳಿಗೆ ಭೇಟಿ ಕೊಟ್ಟು ಪರಿಶೀಲಿಸಬೇಕು. ಗುಣಮಟ್ಟ ಕಾಯ್ದುಕೊಳ್ಳಲು ಬಗ್ಗೆ ಪ್ರತಿ ವಾರ ಉತ್ಪನ್ನಗಳನ್ನ ಲ್ಯಾಬ್‌ಗೆ ತಂದು ಪರಿಶೀಲಿಸುತ್ತೇವೆ. ಕೂಲಂಕುಶವಾಗಿ ತನಿಖೆ ನಡೆಸಿ, ಸತ್ಯಾಸತ್ಯತೆ ಹೊರ ತರುವಂತೆ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ರೈತರು, ಗ್ರಾಹಕರು ಮೈಮುಲ್ ಗೆ ಎರಡು ಕಣ್ಣುಗಳಿದ್ದಂತೆ. ಇಬ್ಬರ ವಿಶ್ವಾಸವನ್ನ ಮೈಮುಲ್ ಕಾಪಾಡಿಕೊಳ್ಳಲಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು