1:38 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ ಪ್ರಕರಣ: 4 ಮಂದಿ ವಿರುದ್ಧ ಎಫ್ ಐಆರ್ ದಾಖಲು

18/12/2021, 09:48

ಮೈಸೂರು(reporterkarnataka.com):

ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಹೊಸಹುಂಡಿ ಗ್ರಾಮದಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ ಪ್ರಕರಣಕ್ಕೆ ಸಂಬoಧಿಸಿದoತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮೈಮುಲ್ ಅಧ್ಯಕ್ಷ ಪ್ರಸನ್ನ ಅವರು ಮೈಮುಲ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ನಕಲಿ ನಂದಿನಿ ತಪ್ಪ ತಯಾರಿಸುತ್ತಿದ್ದ ಪ್ರಕರಣದ ಬಗ್ಗೆ ನೇರವಾಗಿ ಎಸ್ಪಿಗೆ ದೂರು ನೀಡಿದ್ದೇನೆ. ಪ್ರಕರಣ ಸಂಬoಧ ಮುರುಗೇಶ್, ಅಶ್ವಿನಿ, ಸಂತೋಷ್, ಕುಮಾರ್ ಎಂಬುವವರ ಮೇಲೆ ಎಫ್‌ಐಆರ್ ಆಗಿದೆ.

ಮೈಸೂರಿನ ಹೊರವಲಯದ ಹೊಸಹುಂಡಿಯಲ್ಲಿ ನಕಲಿ ತುಪ್ಪ ತಯಾರಿಕೆ ಕಂಡು ಬಂದಿದೆ. ಅಲ್ಲಿಗೂ ನಾವು ಭೇಟಿ ನೀಡಿ, ನಕಲಿ ತುಪ್ಪ ತಯಾರಿಕೆ ಘಟಕವನ್ನ ಸೀಜ್ ಮಾಡಿಸಿದ್ದೇವೆ. ಇದೇ ಮೊದಲು ಈ ಇಂತಹ ಕಲಬೆರಕೆ ಜಾಲ ಕಂಡು ಬಂದಿರೋದು. ಸರ್ಕಾರದ ಮಟ್ಟದಲ್ಲಿ ತನಿಖೆಗೆ ಮನವಿ ಮಾಡಿದ್ದೇವೆ. ಗೋದಾಮಿನಲ್ಲಿ ಸಿಕ್ಕಂತಹ ಎಲ್ಲಾ ನಕಲಿ ವಸ್ತುಗಳನ್ನ ಸೀಜ್ ಮಾಡುವಂತಹ ಕೆಲಸವಾಗಿದೆ. ಫುಡ್ ಡಿಪಾರ್ಟ್ಮೆಂಟ್‌ಗೂ ಮಾದರಿಯನ್ನ ಕಳುಹಿಸಲಾಗಿದೆ. ಮೇಲ್ನೋಟಕ್ಕೆ ಡಾಲ್ಡಾ, ಪಾಮ್ ಆಯಿಲ್ ನಂತಹ ವಸ್ತುಗಳನ್ನು ಬಳಸಿದ್ದಾರೆ. ಇಲ್ಲಿ ತಯಾರಾದ ನಕಲಿ ತುಪ್ಪ ಎಲ್ಲೆಲ್ಲಿ ಪೂರೈಕೆಯಾಗುತ್ತಿತ್ತು. ಯಾರೆಲ್ಲಾ ಇದರಲ್ಲಿ ಭಾಗಿಯಾಗಿದ್ದಾರೆ ಎನ್ನುವುದರ ತನಿಖೆಯಾಗುತ್ತಿದೆ. ಯಾರೇ ಪ್ರಭಾವಿಗಳಿದ್ದರೂ ಬಿಡಲ್ಲ, ಜೈಲಿಗೆ ಕಳುಹಿಸುತ್ತೇವೆ. ಮೈಮುಲ್ ಸಿಬ್ಬಂದಿ ಭಾಗಿಯಾಗಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಂಡು, ಅವರನ್ನು ಸೇವೆಯಿಂದಲೇ ವಜಾ ಮಾಡುತ್ತೇವೆ. ಅಲ್ಲದೇ ಜೈಲಿಗೂ ಕಳುಹಿಸುತ್ತೇವೆ ಎಂದು ಗುಡುಗಿದರು.

ಇಂತಹ ಅಕ್ರಮಗಳನ್ನ ತಡೆಯಲು ವಿಜುಲಿಯನ್ಸ್ ಟೀಂ ಚುರುಕುಗೊಳಿಸುತ್ತೇವೆ ಎಂದರು

ಪ್ರತಿ ವಾರಕ್ಕೊಮ್ಮೆ ಎಲ್ಲಾ ಮಿಲ್ಕ್ ಪಾರ್ಲರ್‌ಗಳಿಗೆ ಭೇಟಿ ಕೊಟ್ಟು ಪರಿಶೀಲಿಸಬೇಕು. ಗುಣಮಟ್ಟ ಕಾಯ್ದುಕೊಳ್ಳಲು ಬಗ್ಗೆ ಪ್ರತಿ ವಾರ ಉತ್ಪನ್ನಗಳನ್ನ ಲ್ಯಾಬ್‌ಗೆ ತಂದು ಪರಿಶೀಲಿಸುತ್ತೇವೆ. ಕೂಲಂಕುಶವಾಗಿ ತನಿಖೆ ನಡೆಸಿ, ಸತ್ಯಾಸತ್ಯತೆ ಹೊರ ತರುವಂತೆ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ರೈತರು, ಗ್ರಾಹಕರು ಮೈಮುಲ್ ಗೆ ಎರಡು ಕಣ್ಣುಗಳಿದ್ದಂತೆ. ಇಬ್ಬರ ವಿಶ್ವಾಸವನ್ನ ಮೈಮುಲ್ ಕಾಪಾಡಿಕೊಳ್ಳಲಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು