5:00 AM Monday27 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ಫಲ್ಗುಣಿ ಶ್ರೀಕಲಾನಾಥೇಶ್ವರ ಸ್ವಾಮಿಯ ಸಂಭ್ರಮದ ರಥೋತ್ಸವ: ಸಹಸ್ರಾರು ಭಕ್ತರಿಂದ ವಿಶೇಷ ಪೂಜೆ

27/03/2024, 21:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೋಳೂರು ಸಾವಿರದ ಫಲ್ಗುಣಿ ಶ್ರೀಕಲಾನಾಥೇಶ್ವರ ಸ್ವಾಮಿಯ ರಥೋತ್ಸವ ಸಹಸ್ರಾರು ಜನರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು.


ಬೆಳಿಗ್ಗೆಯೇ ಫಲ್ಗುಣಿ ಗ್ರಾಮದ ವ್ಯಾಪ್ತಿಯ ಜನರು ದೇವಸ್ಥಾನಕ್ಕೆ ತೆರಳಿ ಹಣ್ಣು ಕಾಯಿ ಮಾಡಿಸಿದರು. ಮಹಾಮಂಗಳಾರತಿ ಕಾರ್ಯದಲ್ಲಿ ಭಾಗವಹಿಸಿ ಕಲಾನಾಥೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಕೃತಾರ್ಥರಾದರು. ಮಂಗಳವಾರ ಸಂಜೆ 4.30ರಿಂದ ಸುತ್ತಮುತ್ತಲಿನ ಗ್ರಾಮಸ್ಥರು, ಹಿರಿಯ ಮುಖಂಡರು ಜಾತ್ರೆಯಲ್ಲಿ ಭಾಗವಹಿಸಿ ಸ್ವಾಮಿಯ ರಥವನ್ನು ಎಳೆದು ಸಂಭ್ರಮಿಸಿದರು. ದೇವಸ್ಥಾನದ ಅಭಿವೃದ್ದಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಜಾತ್ರೋತ್ಸವದಲ್ಲಿ ಭಾಗವಹಿಸಿ ಉತ್ಸವಕ್ಕೆ ಕಳೆ ತಂದರು.
ಉತ್ಸವದ ಎರಡನೇ ದಿನವಾದ ಬುಧವಾರ ಕಲಾನಾಥೇಶ್ವರ ಸ್ವಾಮಿ ಹಾಗೂ ಪಾರ್ವತಿ ಅಮ್ಮನವರಿಗೆ ನೀರೋಕಳಿ ಪೂಜೆಯನ್ನು ನೆರವೇರಿಸಲಾಯಿತು. ದೇವರಿಗೆ ಅವಭೃತ ಸ್ನಾನವನ್ನು ನೆರವೇರಿಸಿ ಮಹಾಮಂಗಳಾರತಿ ನೆರವೇರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು