7:06 AM Tuesday31 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಫಲ್ಗುಣಿಯಲ್ಲಿ ರಾಟವಾಣ ಉತ್ಸವ: ಕೋಳೂರು ಸಾವಿರದ ಸಂಭ್ರಮದ ಸುಗ್ಗಿ ಆಚರಣೆ; 14 ಗ್ರಾಮದೇವತೆಗಳಿಗೆ ವಿಶೇಷ ಪೂಜೆ

07/05/2023, 00:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಫಲ್ಗುಣಿಯ ಕೋಳೂರು ಸಾವಿರದ ರಾಟವಾಣ ಉತ್ಸವ ವಿಜೃಂಭಣೆಯಿಂದ ಜರುಗಿತು. ಸುತ್ತಮುತ್ತಲಿನ 14 ಗ್ರಾಮದ ಸಾವಿರಕ್ಕೂ ಅಧಿಕ ಭಕ್ತರು 14 ಗ್ರಾಮದ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಕೋಳೂರು ಸಾವಿರದ ಭಕ್ತರು ರಾಟವಾಣದ ಮೇಲೆ ಕುಳಿತು ಸುತ್ತುವ ಮೂಲಕ ಪ್ರಸಿದ್ಧವಾದ ರಾಟವಾಣ ಉತ್ಸವಕ್ಕೆ ಚಾಲನೆ ನೀಡಿದರು. ವಿವಿಧ ಗ್ರಾಮಗಳಿಂದ ಬಂದ ಗ್ರಾಮಸ್ಥರು ದೇವತೆಗಳಿಗೆ ಪೂಜೆ ಸಲ್ಲಿಸಿ, ಹರಕೆ ಒಪ್ಪಿಸಿದ ಬಳಿಕ ಆಯಾ ಗ್ರಾಮದ ದೇವತೆಗಳನ್ನು ಕರೆದೊಯ್ಯಲಾಯಿತು.

ರಾಟವಾಣ ಉತ್ಸವದಂದು ಕೋಳೂರು ಸಾವಿರದ ಗ್ರಾಮಗಳಿಗೆ ಮಳೆ ಬರುತ್ತದೆ ಎಂಬ ಆಗಾಧ ನಂಬಿಕೆ ಜನರಲ್ಲಿದೆ. ಇದೇ 11ರಂದು ಸುಗ್ಗಿ ಉತ್ಸವದ ಒಳ್ಳೆ ಮಾತಿನವರು ಎಂಬ ಸೇವಾಕರ್ತರು ದೇವರಮನೆ ಗ್ರಾಮದಲ್ಲಿರುವ ಶ್ರೀಕಾಲಭೈರವೇಶ್ವರ ಸ್ವಾಮಿಗೆ ಸೊಪ್ಪು ಒಪ್ಪಿಸುವುದರ ಮೂಲಕ 15 ದಿನಗಳ ಸುಗ್ಗಿ ಉತ್ಸವಕ್ಕೆ ತೆರೆ ಬೀಳುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು