5:05 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಫಲ್ಗುಣಿಯಲ್ಲಿ ರಾಟವಾಣ ಉತ್ಸವ: ಕೋಳೂರು ಸಾವಿರದ ಸಂಭ್ರಮದ ಸುಗ್ಗಿ ಆಚರಣೆ; 14 ಗ್ರಾಮದೇವತೆಗಳಿಗೆ ವಿಶೇಷ ಪೂಜೆ

07/05/2023, 00:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಫಲ್ಗುಣಿಯ ಕೋಳೂರು ಸಾವಿರದ ರಾಟವಾಣ ಉತ್ಸವ ವಿಜೃಂಭಣೆಯಿಂದ ಜರುಗಿತು. ಸುತ್ತಮುತ್ತಲಿನ 14 ಗ್ರಾಮದ ಸಾವಿರಕ್ಕೂ ಅಧಿಕ ಭಕ್ತರು 14 ಗ್ರಾಮದ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಕೋಳೂರು ಸಾವಿರದ ಭಕ್ತರು ರಾಟವಾಣದ ಮೇಲೆ ಕುಳಿತು ಸುತ್ತುವ ಮೂಲಕ ಪ್ರಸಿದ್ಧವಾದ ರಾಟವಾಣ ಉತ್ಸವಕ್ಕೆ ಚಾಲನೆ ನೀಡಿದರು. ವಿವಿಧ ಗ್ರಾಮಗಳಿಂದ ಬಂದ ಗ್ರಾಮಸ್ಥರು ದೇವತೆಗಳಿಗೆ ಪೂಜೆ ಸಲ್ಲಿಸಿ, ಹರಕೆ ಒಪ್ಪಿಸಿದ ಬಳಿಕ ಆಯಾ ಗ್ರಾಮದ ದೇವತೆಗಳನ್ನು ಕರೆದೊಯ್ಯಲಾಯಿತು.

ರಾಟವಾಣ ಉತ್ಸವದಂದು ಕೋಳೂರು ಸಾವಿರದ ಗ್ರಾಮಗಳಿಗೆ ಮಳೆ ಬರುತ್ತದೆ ಎಂಬ ಆಗಾಧ ನಂಬಿಕೆ ಜನರಲ್ಲಿದೆ. ಇದೇ 11ರಂದು ಸುಗ್ಗಿ ಉತ್ಸವದ ಒಳ್ಳೆ ಮಾತಿನವರು ಎಂಬ ಸೇವಾಕರ್ತರು ದೇವರಮನೆ ಗ್ರಾಮದಲ್ಲಿರುವ ಶ್ರೀಕಾಲಭೈರವೇಶ್ವರ ಸ್ವಾಮಿಗೆ ಸೊಪ್ಪು ಒಪ್ಪಿಸುವುದರ ಮೂಲಕ 15 ದಿನಗಳ ಸುಗ್ಗಿ ಉತ್ಸವಕ್ಕೆ ತೆರೆ ಬೀಳುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು