2:39 AM Thursday11 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ ರಮೇಶ್ ಅರವಿಂದ್: ತೆರೆದ ವಾಹನದಲ್ಲಿ ಮೆರವಣಿಗೆ

19/04/2025, 19:07

ಪುತ್ತೂರು(reporterkarnataka.com): ಸುಮಾರು 8 ದಶಕಗಳ ಇತಿಹಾಸವಿರುವ ಪುತ್ತೂರಿನ ಮುಳಿಯ ಚಿನ್ನದ ಮಳಿಗೆಯ ವಿಸ್ತೃತ ಹಾಗೂ ನವೀಕೃತ
ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಅನ್ನು ದಕ್ಷಿಣ ಭಾರತದ ಜನಪ್ರಿಯ ಸಿನಿಮಾ ನಟ ರಮೇಶ ಅರವಿಂದ್ ಅವರು ನಾಳೆ(ಏ. 20) ಉದ್ಘಾಟಿಸಲಿದ್ದಾರೆ.


ಮುಳಿಯ ಚಿನ್ನಾಭರಣಗಳ ಶೋರೂಮ್ ಹಲವು ಹೊಸತನದೊಂದಿಗೆ ದಕ್ಷಿಣ ಕನ್ನಡದ ಬೃಹತ್ ಮಳಿಗೆಯಾಗಿ ನಾಳೆ ಅನಾವರಣಗೊಳ್ಳಲಿದೆ. ಚಲನಚಿತ್ರ ನಟ ರವೇಶ್ ಅರವಿಂದ್ ಅವರು ನಾಳೆ ಬೆಳಿಗ್ಗೆ 9.30 ಗಂಟೆಗೆ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಆನಂತರ ದೇವರ ದೀಪದೊಂದಿಗೆ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಶೋರೂಮ್ ಬಂದು ದೀಪ ಬೆಳಗಿಸಿ ಉದ್ಘಾಟಿಸಲಿರುವರು. ರಮೇಶ್ ಅರವಿಂದ್ ಅವರನ್ನು ತೆರೆದ ವಾಹನದಲ್ಲಿ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಗೋಲ್ಡ್ & ಡೈಮಂಡ್ ಶೋರೂಮಿಗೆ ಕರೆತರಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು