8:46 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಕನ್ನಡದ ಪ್ರಸಿದ್ಧ ಹಾಸ್ಯ ನಟ ಉಮೇಶ್ ನಿಧನ: ಮುಖ್ಯಮಂತ್ರಿ ಸಹಿತ ಗಣ್ಯರ ಸಂತಾಪ

30/11/2025, 16:46

ಬೆಂಗಳೂರು(reporterkarnataka.com): ಕನ್ನಡ ಪ್ರಸಿದ್ದ ಹಾಸ್ಯ ನಟ ಉಮೇಶ್ ಅವರು ಇಂದು ನಿಧನರಾದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ 80ರ ಹರೆಯದ ಅವರು ಇಂದು ಕೊನೆಯುಸಿರೆಳೆದರು. ಉಮೇಶ್ ಅವರು ರಂಗನಟನಾಗಿದ್ದು, 900ಕ್ಕೂ ಹೆಚ್ಚು ಸಿನಿಮಾದಲ್ಲಿ ನಟಿಸಿದ್ದಾರೆ.
*ಸಿಎಂ ಸಹಿತ ಗಣ್ಯರ ಸಂತಾಪ:* ಸುಮಾರು 900 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಖ್ಯಾತ ಹಾಸ್ಯ ನಟರಾಗಿದ್ದ ಉಮೇಶ್ ರವರ ನಿಧನದಿಂದ ದು:ಖ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದರು.

ಅವರು ಇಂದು ಚಲನಚಿತ್ರ ನಟ ಉಮೇಶ್ ರವರ ಪಾರ್ಥೀವ ಶರೀರವನ್ನು ದರ್ಶನ ಮಾಡಿ ಕುಟುಂಬಕ್ಕೆ ಸಾಂತ್ವನ ತಿಳಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್ ರವರ ನಿಧನರಾಗಿದ್ದಾರೆ. ಮೈಸೂರಿನವರಾದ ಉಮೇಶ್ ರವರು ತಮ್ಮ ಕಿರಿಯ ವಯಸ್ಸಿನಲ್ಲಿಯೇ ರಂಗಭೂಮಿಯ ನಟರಾಗಿ, ನಂತರ ಚಲನಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಸುಮಾರು 900 ಚಿತ್ರಗಳಲ್ಲಿ ಅಭಿನಯಿಸಿದ ಅನುಭವವಿರುವ ಉಮೇಶ್ ರವರು ಹಾಸ್ಯನಟರಾಗಿ ಖ್ಯಾತರಾಗಿದ್ದರು. 80 ವರ್ಷ ವಯಸ್ಸಿನ ಉಮೇಶ್ ರವರು ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿದ್ದು, ಅವರ ಕೋರಿಕೆ ಮೇರೆಗೆ ಉಚಿತ ಕ್ಯಾನ್ಸರ್ ಚಿಕಿತ್ಸೆಗೆ ಸರ್ಕಾರದಿಂದ ನೆರವು ನೀಡಲಾಗಿತ್ತು ಎಂದರು.
ಉಮೇಶ್ ರವರ ಶ್ರೀಮತಿಯವರು ಅನಾರೋಗ್ಯದಿಂದ ಬಳಲುತ್ತಿದ್ದು, ಶೀಘ್ರ ಗುಣಮುಖರಾಗಲೆಂದು ಹಾರೈಸಿದ ಮುಖ್ಯಮಂತ್ರಿಗಳು, ಕನ್ನಡ ಚಿತ್ರರಂಗದ ಮೇರುನಟನನ್ನು ಕಳೆದುಕೊಂಡಿರುವುದು ಅತೀವ ದು:ಖ ತಂದಿದ್ದು, ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಯವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು