6:43 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ

25/09/2022, 18:02

ಬಂಟ್ವಾಳ(reporterkarnataka.com): ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ. ಬಂಟ್ವಾಳ ತಾಲೂಕಿನ ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಶನಿವಾರ ಚಿರತೆಯೊಂದು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು, ಇದರಿಂದ ಈ ಪರಿಸರದ ಜನತೆಯಲ್ಲಿ ಆತಂಕ ಉಂಟು ಮಾಡಿದೆ.

ಮಾರಿಪಳ್ಳದ ನಿವಾಸಿ ರಫೀಕ್ ಎಂಬವರು ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಫರಂಗಿಪೇಟೆ ಸಮೀಪದ 10ನೇ ಮೈಲುಗಲ್ಲು ಬಳಿ ಚಿರತೆಯೊಂದನ್ನು ನೋಡಿದ್ದಾಗಿ ತಿಳಿಸಿದ್ದಾರೆ.

ಹತ್ತನೇ ಮೈಲುಗಲ್ಲಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಚಿರತೆಯನ್ನು ನೋಡಿದ್ದು ಕೂಡಲೇ ಅದು ಹೆದ್ದಾರಿ ಪಕ್ಕದ ಖಾಲಿ ಜಾಗದಲ್ಲಿ ಓಡಿದೆ ಎಂದು ತಿಳಿಸಿದ್ದಾರೆ.

ಚಿರತೆಯ ಬಗ್ಗೆ ಅವರು ಪಕ್ಕದ ಹೊಟೇಲ್ ಒಂದರಲ್ಲಿದ್ದ ಸ್ಥಳೀಯರಲ್ಲಿ ಮಾಹಿತಿ ನೀಡಿದ್ದು ಬಳಿಕ ಈ ಸುದ್ದಿ ಪರಿಸರದಲ್ಲಿ ಹರಿದಾಡಿದ್ದರಿಂದ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಫರಂಗಿಪೇಟೆ ಸಮೀಪದ ವಳಚ್ಚಿಲ್ ಪದವು ಎಂಬಲ್ಲಿನ ಜನರು ಶನಿವಾರ ಬೆಳಗ್ಗೆ ಪರಿಸರದಲ್ಲಿ ಚಿರತೆಯೊಂದನ್ನು ನೋಡಿದ್ದ ಬಗ್ಗೆ ಸುದ್ದಿ ತಿಳಿದು ಬಂದಿದೆ. ಅದೇ ಚಿರತೆ ರಾತ್ರಿ ಹತ್ತನೇ ಮೈಲುಗಲ್ಲಿನಲ್ಲಿ ಕಂಡುಬಂದಿರಬಹುದು ಎಂದು ಸ್ಥಳೀಯ ಜನರು ತಿಳಿಸಿದ್ದಾರೆ‌.

ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು ಎಂದು ಪುದು ಗ್ರಾಮ ಪಂಚಾಯತ್‌ ಅಧ್ಯಕ್ಷ ರಮ್ಲಾನ್‌ ಮಾರಿಪಳ್ಳ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು