10:24 PM Saturday7 - March 2026
ಬ್ರೇಕಿಂಗ್ ನ್ಯೂಸ್
ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಫರಂಗಿಪೇಟೆ: ‘ವರ್ಣಾಂಜಲಿ’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

24/12/2023, 21:54

ಬಂಟ್ವಾಳ(reporterkarnataka.com): ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ “ ವರ್ಣಾಂಜಲಿ” ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯ ಉದ್ಘಾಟನಾ ಸಮಾರಂಭ ಭಾನುವಾರ ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು.

ಸಮಾರಂಭದ ಉದ್ಘಾಟನೆಯನ್ನು ಏರ್ಯ ಆಳ್ವ ಪೌಂಡೇಷನ್ ನ ಏರ್ಯ ಬಾಲಕೃಷ್ಣ ಹೆಗ್ಡೆ, ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಚಿತ್ರಕಲೆ, ಸಂಗೀತ,ಸಾಹಿತ್ಯ ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ಕಲಿಸಿಕೊಡುತ್ತದೆ, ಮಕ್ಕಳಿಗೆ ಬಾಲ್ಯದಲ್ಲಿಯೇ ಸಂಸ್ಕಾರ ಶಿಕ್ಷಣ ಅಗತ್ಯವಾಗಿದ್ದು,ಕಲಾ ಪ್ರಾಕಾರಗಳಿಗೆ ಪ್ರಾಮುಖ್ಯತೆ ಸಿಗಬೇಕು. ಸಾವಿರಾರು ಮಕ್ಕಳಿಗೆ ಸೇವಾಂಜಲಿ ಪ್ರತಿಷ್ಠಾಪನದ ಮೂಲಕ ಸ್ಪೂರ್ತಿ ಸಿಗಲಿ ಎಂದು ಶುಭ ಹಾರೈಸಿದರು.
ಅತಿಥಿಗಳಾಗಿ ಬಿ. ರಾಮಚಂದ್ರ ರಾವ್, (ನಿವೃತ್ತ ಶಿಕ್ಷಕರು, ಬಿ.ಸಿ.ರೋಡು) ಹಾಗೂ ಮಹಾಬಲೇಶ್ವರ ಹೆಬ್ಬಾರ್ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಸೇವಾಂಜಲಿ ಪ್ರತಿಷ್ಠಾನ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ ಪೂಂಜ ಪ್ರಾಸ್ತವಿಕವಾಗಿ ಮಾತನಾಡಿ ಪ್ರತಿ ವರ್ಷ ಕೂಡ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಸಂಘಟಿಸುವುದಾಗಿ ಹೇಳಿದರು .
ಮಧ್ಯಾಹ್ನ ನಡೆದ ಸ್ಪರ್ಧಾ ವಿಜೇತರ ಬಹುಮಾನ ವಿತರಣ ಕಾರ್ಯಕ್ರಮದಲ್ಲಿ ಚಿತ್ರಕಲಾ ಶಿಕ್ಷಕರಾದ ಬಾಲಕೃಷ್ಣ ಶೆಟ್ಟಿ ಮಂಚಿ, ಪೆರ್ಮುದೆ ಮೋಹನ್ ಕುಮಾರ, ಮುರಳಿಧರ ಪೊಳಲಿ, ಪತ್ರಕರ್ತ ಸಂತೋಷ್ ಕುಲಾಲ್ ನೆತ್ತರಕೆರೆ, ಸಾಮಾಜಿಕ ಕಾರ್ಯಕರ್ತ ಮನೋಜ್ ತುಪ್ಪಕಲ್ಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪ್ರಮುಖರಾದ ಅರ್ಜುನ್ ಪೂಂಜ, ಸುಕೇಶ್ ಶೆಟ್ಟಿ ತೇವು, ದೇವದಾಸ ಅರ್ಕುಳ, ದಿನೇಶ ತುಂಬೆ, ವಿಕ್ರಂ ಬರ್ಕೆ, ಪ್ರಶಾಂತ್ ತುಂಬೆ, ಪ್ತವೀಣ್ ಕಬೇಲ,ಉಮೇಶ್ ಕೊಳಂಬೆ ಮತ್ತಿತರರು ಉಪಸ್ಥಿತರಿದ್ದರು.
ಸುಮಾರು 400ಕ್ಕೂ ಹೆಚ್ಚು ಮಕ್ಕಳು ಚಿತ್ರಕಲಾ ಸ್ಪರ್ಧೆಯಲ್ಲಿ ಸಂಭ್ರಮದಿಂದ ಭಾಗವಹಿಸಿದ್ದು, ಎಲ್ಲರಿಗೂ ಪ್ರಶಸ್ತಿ ಪತ್ರ ಹಾಗೂ ಏರ್ಯ ಆಳ್ವ ಪೌಂಡೇಷನ್ ವತಿಯಿಂದ ಕಲರ್ ಪೆನ್ಸಿಲ್ ಬಾಕ್ಸ್ ವಿತರಿಸಲಾಯಿತು.
ಸ್ಪರ್ಧಾ ವಿಜೇತರ ವಿವರ:
ಕಿರಿಯ ವಿಭಾಗ
ಪ್ರಥಮ: ನಿಹಾರಿಕಾ,
ದ್ವಿತೀಯ: ಅಂಕಿತಾ ಶರ್ಮ
ತೃತೀಯ: ಕೃತಿ ಸಾಲ್ಯಾನ್
ಸಮಾದಾನಕರ ಬಹುಮಾನ :
ಸಾರಾ ಶಾಹಿನಾ,
ಪ್ರಣಮ್ಯ ಸುವರ್ಣ
ಹಿರಿಯ ವಿಭಾಗ
ಪ್ರಥಮ: ಸ್ಪಂದನಾ
ದ್ವಿತೀಯ: ನಿನಾದ್
ತೃತೀಯ:ಮನ್ವಿತ್
ಸಮಾಧಾನಕರ ಬಹುಮಾನ:
ರಿಷಿಕ್, ನಿಹಾಲ್
ಪ್ರೌಢಶಾಲೆ ವಿಭಾಗ :
ಪ್ರಥಮ:;ಕೀರ್ತನ್
ದ್ವಿತೀಯ: ಸಮೀಕ್ಷಾ
ತೃತೀಯ: ಅನ್ವಿತ್
ಸಮಾಧಾನಕರ ಬಹುಮಾನ :
ಸುಕನ್ಯಾ, ರೀತಿಶ ಕೆ. ಜೆ.

ಇತ್ತೀಚಿನ ಸುದ್ದಿ

ಜಾಹೀರಾತು