3:27 PM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ನಾಲತವಾಡ ಬಳಿ ಭೀಕರ ರಸ್ತೆ ಅಪಘಾತ: ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

07/05/2025, 20:58

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ನಾರಾಯಣಪುರದಿಂದ ಮುದ್ದೇಬಿಹಾಳ ಕಡೆಗೆ ಸಾಗುತ್ತಿದ್ದ ಸರಕಾರಿ ಬಸ್, ಬುಧವಾರ ಸಂಜೆ ನಾಲತವಾಡ ಗ್ರಾಮದ ಆರೇಶಂಕರ ಕ್ರಾಸ್ ಹತ್ತಿರ ಬೈಕಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿಯನ್ನು ನಾಲತವಾಡ ಪಟ್ಟಣದ 5ನೇ ವಾರ್ಡಿನ ನಿವಾಸಿ ಸಂಗಪ್ಪ ಬಸಪ್ಪ ಗೌಡೂರ (28) ಎಂದು ಗುರುತಿಸಲಾಗಿದೆ. ಸ್ಥಳೀಯ ಪ.ಪಂಯಲ್ಲಿ ಪೌರ ಕಾರ್ಮಿಕನಾಗಿ ಸೇವೆ ಸಲ್ಲಿಸುತ್ತಿದ್ದ ಅವರು, ಪರಿಚಯದ ಮಹಿಳೆಯೊಂದಿಗೆ ಬೈಕ್‌ನಲ್ಲಿ ಆರೇಶಂಕರ ಗ್ರಾಮಕ್ಕೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಆರೇಶಂಕರ ಕ್ರಾಸ್ ಹತ್ತಿರ, ಮುಂಭಾಗದಿಂದ ಬಂದ ಬಸ್ ಹಠಾತ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಸಂಗಪ್ಪ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿ ಜೊತೆಗಿದ್ದ ಮಹಿಳೆಗೆ ಲಘು ಗಾಯಗಳಾಗಿವೆ ಎಂದು ವರದಿಯಾಗಿದೆ.
ಪೊಲೀಸರು ಮುದ್ದೇಬಿಹಾಳ ಪಿಎಸೈ ಸಂಜೀವ ತಿಪ್ಪಾರಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ಪರಿಣಾಮ ಗ್ರಾಮದಲ್ಲಿ ಶೋಕ ವಾತಾವರಣ ಮನೆಮಾಡಿದೆ.
ಸೋಮವಾರ ಎರಡು ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದರು. ಇದಾದ ಮೇಲೆ ಬುಧವಾರ ಮತ್ತೇ ಈ ಅಪಘಾತ ನಡೆದಿದೆ. ಎರಡು ದಿನಗಳಲ್ಲಿ ನಾಲತವಾಡ ಗ್ರಾಮದ ಮೂರು ಜನರು ದುರ್ಮಣಕ್ಕೆ ಈಡಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು