12:11 AM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯಲ್ಲಿ ಡ್ಯುಯಲ್ ಸೆಲೆಬ್ರೇಷನ್: ಸಾಧನೆಯ ಮೈಲಿಗಲ್ಲು

26/08/2024, 18:53

ಮಂಗಳೂರು(reporterkarnataka.com): ನಗರದ ಫಾದರ್ ಮುಲ್ಲರ್ ಚಾರಿಟಬಲ್ ಸಂಸ್ಥೆ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ಸೋಮವಾರ ಡ್ಯುಯಲ್ ಸೆಲೆಬ್ರೇಷನ್ (ದ್ವಿ ಆಚರಣೆ)) ನಡೆಸಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಫಾದರ್ ಮುಲ್ಲರ್ ಸಮೂಹ ಸಂಸ್ಥೆಗಳ ವತಿಯಿಂದ ಕರ್ನಾಟಕ ರಾಜ್ಯ ಅಲೈಡ್ ಮತ್ತು ಹೆಲ್ತ್ಕೇರ್ ಕೌನ್ಸಿಲ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಪ್ರೊ. ಡಾ.ಯು.ಟಿ. ಇಫ್ತಿಕಾರ್ ಫರೀದ್ ಅವರನ್ನು ಶಾಲು, ಫಲ ಪುಷ್ಪಗಳಿಂದ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಫಾದರ್ ಮುಲ್ಲರ್ ಕಾಲೇಜ್ ಆಫ್ ಫಿಸಿಯೋಥೆರಪಿ (ಎಫ್‌ಎಂಸಿಒಪಿ) ತನ್ನ ್ಲ ೩೦ ವರ್ಷ ಪೂರೈಸಿದ ಸಂದರ್ಭದಲ್ಲಿ ದೈಹಿಕ ಫಿಟ್‌ನೆಸ್ ಅಸೆಸ್‌ಮೆಂಟ್ ಮತ್ತು ಎಕ್ಸರ್ಸೈಸ್ ಪ್ರಿಸ್ಕ್ರಿಪ್ಷನ್ ಕುರಿತು ಎರಡು ದಿನಗಳ ಕಾರ್ಯಕ್ರಮವನ್ನು ಎಂ.ಎಸ್. ರಾಮಯ್ಯ ಕಾಲೇಜ್ ಆಫ್ ಫಿಸಿಯೋಥೆರಪಿ ಇದರ ಡಾ. ಸುಂದರ್ ಕುಮಾರ್ ವೇಲುಸಾಮಿ ಅವರು ಉದ್ಘಾಟಿಸಿದರು.
ಸನ್ಮಾನವನ್ನು ಸ್ವೀಕರಿಸಿದ ಪ್ರೊ. ಡಾ.ಯು.ಟಿ. ಇಫ್ತಿಕಾರ್ ಫರೀದ್ ಮಾತನಾಡಿ ಫಾದರ್ ಮುಲ್ಲರ್ ಸಂಸ್ಥೆಯ ಕಾರ್ಯವೈಖರಿಯನ್ನು ಕೊಂಡಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಫಾದರ್ ಮುಲ್ಲರ್ ಸಮೂಹ ಸಂಸ್ಥೆಗಳ ನಿರ್ದೇಶಕ ನಿರ್ದೇಶಕ ವಂ| ಪಾ| ರಿಚರ್ಡ್ ಅಲೋಶಿಯಸ್ ಕೊಯೆಲ್ಹೋ ಮಾತನಾಡಿ ನಮ್ಮ ಸಂಸ್ಥೆ ಆರೋಗ್ಯ ಶಿಕ್ಷಣಕ್ಕೆ ತನ್ನ ಬದ್ಧತೆಯನ್ನು ಹೊಂದಿದೆ. ಆನರಿಗೆ ಆರೋಗ್ಯ ವನ್ನು ನೀಡುವ ಸಂದರ್ಭದಲ್ಲಿ ನುರಿತ ವೈದ್ಯರುಗಳು ಹಾಘೂ ಇತರ ಸಿಬ್ಬಂದಿಯವರು ಒಂದು ತಂಡವಾಗಿ ಕೆಲಸ ಮಾಡಿ ಉತ್ತಮ ಆರೋಗ್ಯ ಸೇವೆಯನ್ನು ನೀಡುತ್ತಾ ಬಂದಿದಾರೆ ಎಂದರು. ವೇದಿಕೆಯಲ್ಲಿ ಗಣ್ಯರು ರೆ.ಫಾ. ಫೌಸ್ಟಿನ್ ಲೂಕಾಸ್ ಲೋಬೋ, ರೆ.ಫಾ. ಅಜಿತ್ ಬಿ.ಮಿನೇಜಸ್, ರೆ.ಫಾ. ಸಿಲ್ವೆಸ್ಟರ್ ವಿನ್ಸೆಂಟ್ ಲೋಬೊ, ಡಾ. ಆಂಟನಿ ಸಿಲ್ವನ್ ಡಿಸೋಜಾ, ಡಾ. ಹಿಲ್ಡಾ ಫೆರ್ನಾಂಡಿಸ್, ಮತ್ತು ಪ್ರೊ.ಚೆರಿಶ್ಮಾ ಡಿಸಿಲ್ವಾ ಉಪಸ್ಥಿತರಿದ್ದರು. ಫಿಸಿಯೋಥೆರಪಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶೀತಲ್ ವಿ ಪೈ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು