2:31 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಫಾದರ್ ಮುಲ್ಲರ್ ಹೋಮಿಯೋಪಥಿಕ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವಿಶ್ವ ಹೋಮಿಯೋಪತಿ ದಿನಾಚರಣೆ

02/05/2024, 14:43

ಮಂಗಳೂರು(reporterkarnataka.com);ಹೋಮಿಯೋಪತಿಯನ್ನು ವೈಜ್ಞಾನಿಕ ವಿಚಾರಗಳೊಂದಿಗೆ ಜನರಿಗೆ ಪ್ರಸ್ತುತಪಡಿಸುವಲ್ಲಿ ಫಾದರ್ ಮುಲ್ಲರ್ ಸಂಸ್ಥೆ ಯಶಸ್ವಿ ಹೆಜ್ಜೆಯನ್ನಿಟ್ಟಿದ್ದು, ವಿದ್ಯಾರ್ಥಿಗಳು ಪ್ರಸ್ತುತತೆಯನ್ನು ಅಳವಡಿಸಿ ಅಧ್ಯಯನದೊಂದಿಗೆ ಸಂಶೋಧನೆ ನಡೆಸುವ ಮನೋಭಾವ ಬೆಳೆಸಿಕೊಂಡಾಗ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ಸಿಎಜಿ ಇಂಡಿಯಾದ ಸೀನಿಯರ್ ಅಕೌಂಟೆಂಟ್ ಜನರಲ್ ಡಾ. ರಾಹುಲ್ ಪಿ. ಹೇಳಿದರು.


ಹೋಮಿಯೋಪತಿ ಜನಕ ಡಾ. ಸ್ಯಾಮುವೆಲ್ ಹಾನ್ನಿಮನ್ 269ನೇ ಜನ್ಮದಿನದ ಸ್ಮರಣಾರ್ಥ ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪತಿಕ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಆಡಿಟೋರಿಯಂನಲ್ಲಿ ಮಂಗಳವಾರ ಜರಗಿದ ವಿಶ್ವ ಹೋಮಿಯೋಪತಿ ದಿನ -2024 ಆಚರಣೆಗೆ ಚಾಲನೆ ನೀಡಿ ಮಾತನಾಡಿದರು.
ಹೊರಜಗತ್ತಿನ ದಾಸ್ಯಗಳಿಗೆ ಬಲಿಯಾಗದೆ, ಜೀವನದ ಯಶಸ್ಸಿನ ಹಾದಿಯಲ್ಲಿ ಮುಂದುವರಿಯಿರಿ, ತನ್ನ ಸಹಪಾಠಿಗಳು ಹೋಮಿಯೋಪತಿಯಲ್ಲಿ ವೃತ್ತಿ ಮುಂದುವರಿಸಿ ಯಶಸ್ಸಿನ ಹಾದಿಯಲ್ಲಿದ್ದಾರೆ. ಯಶಸ್ಸಿಗೆ ವಯಸ್ಸಿನ ವಯೋಮಿತಿಯಲ್ಲ. ನಿರಂತರ ಅಧ್ಯಯನ ನಡೆಸುವವರಾಗಿರಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ಫಾ. ರಿಚರ್ಡ್ ಅಲೋಶಿಯಸ್ ಕುವೆಲ್ಲೊ ಮಾತನಾಡಿ, ಹೋಮಿಯೋಪತಿ ಸಂಸ್ಥೆಯಲ್ಲಿ ಅಧ್ಯಯನ ನಡೆಸಿದವರು ವಿವಿಧ ಕ್ಷೇತ್ರಗಳಲ್ಲಿ ಇದ್ದರೂ ಯಶಸ್ಸಿನ ಹಾದಿಯಲ್ಲಿದ್ದಾರೆ ಎಂದರು.
ಹೋಮಿಯೋಪತಿ ದಿನಾಚರಣೆ ಮೂಲಕ ಹಳೆಯ ವಿದ್ಯಾರ್ಥಿಗಳನ್ನು ಹಾಗೂ ಅವರ ವ್ಯಕ್ತಿತ್ವವನ್ನು ಮೆಲುಕು ಹಾಕುವ ಕಾರ್ಯ ಆಗಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಕೇರಳ ಸರಕಾರದ ಹೋಮಿಯೋಪತಿ ವಿಭಾಗದ ವೈದ್ಯಕೀಯ ಅಧಿಕಾರಿ ಡಾ. ಜೆರಾಲ್ಡ್ ಜಯಕುಮಾರ್ ಮತ್ತು ಡಾ. ಬಿನುರಾಜ್ ಟಿ.ಕೆ. ಜತೆಗೂಡಿ ಹೊರತಂದ ‘ಹೋಮಿಯೋ ಎವಿಡೆನ್ಸ್ ಡಾಟ್‌ಕಾಂ ಎಂಬ ಡಿಜಿಟಲ್ ಡಾಟಾಬೇಸ್ ವೆಬ್‌ಸೈಟ್‌ಗೆ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ಆಡಳಿತಾಧಿಕಾರಿ ಫಾ. ರೋಷನ್ ಕ್ರಾಸ್ತಾ ಬಿಡುಗಡೆಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು