5:22 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಫಾದರ್ ಮುಲ್ಲರ್ ಹೋಮಿಯೋಪಥಿಕ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವಿಶ್ವ ಹೋಮಿಯೋಪತಿ ದಿನಾಚರಣೆ

02/05/2024, 14:43

ಮಂಗಳೂರು(reporterkarnataka.com);ಹೋಮಿಯೋಪತಿಯನ್ನು ವೈಜ್ಞಾನಿಕ ವಿಚಾರಗಳೊಂದಿಗೆ ಜನರಿಗೆ ಪ್ರಸ್ತುತಪಡಿಸುವಲ್ಲಿ ಫಾದರ್ ಮುಲ್ಲರ್ ಸಂಸ್ಥೆ ಯಶಸ್ವಿ ಹೆಜ್ಜೆಯನ್ನಿಟ್ಟಿದ್ದು, ವಿದ್ಯಾರ್ಥಿಗಳು ಪ್ರಸ್ತುತತೆಯನ್ನು ಅಳವಡಿಸಿ ಅಧ್ಯಯನದೊಂದಿಗೆ ಸಂಶೋಧನೆ ನಡೆಸುವ ಮನೋಭಾವ ಬೆಳೆಸಿಕೊಂಡಾಗ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ಸಿಎಜಿ ಇಂಡಿಯಾದ ಸೀನಿಯರ್ ಅಕೌಂಟೆಂಟ್ ಜನರಲ್ ಡಾ. ರಾಹುಲ್ ಪಿ. ಹೇಳಿದರು.


ಹೋಮಿಯೋಪತಿ ಜನಕ ಡಾ. ಸ್ಯಾಮುವೆಲ್ ಹಾನ್ನಿಮನ್ 269ನೇ ಜನ್ಮದಿನದ ಸ್ಮರಣಾರ್ಥ ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪತಿಕ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಆಡಿಟೋರಿಯಂನಲ್ಲಿ ಮಂಗಳವಾರ ಜರಗಿದ ವಿಶ್ವ ಹೋಮಿಯೋಪತಿ ದಿನ -2024 ಆಚರಣೆಗೆ ಚಾಲನೆ ನೀಡಿ ಮಾತನಾಡಿದರು.
ಹೊರಜಗತ್ತಿನ ದಾಸ್ಯಗಳಿಗೆ ಬಲಿಯಾಗದೆ, ಜೀವನದ ಯಶಸ್ಸಿನ ಹಾದಿಯಲ್ಲಿ ಮುಂದುವರಿಯಿರಿ, ತನ್ನ ಸಹಪಾಠಿಗಳು ಹೋಮಿಯೋಪತಿಯಲ್ಲಿ ವೃತ್ತಿ ಮುಂದುವರಿಸಿ ಯಶಸ್ಸಿನ ಹಾದಿಯಲ್ಲಿದ್ದಾರೆ. ಯಶಸ್ಸಿಗೆ ವಯಸ್ಸಿನ ವಯೋಮಿತಿಯಲ್ಲ. ನಿರಂತರ ಅಧ್ಯಯನ ನಡೆಸುವವರಾಗಿರಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ಫಾ. ರಿಚರ್ಡ್ ಅಲೋಶಿಯಸ್ ಕುವೆಲ್ಲೊ ಮಾತನಾಡಿ, ಹೋಮಿಯೋಪತಿ ಸಂಸ್ಥೆಯಲ್ಲಿ ಅಧ್ಯಯನ ನಡೆಸಿದವರು ವಿವಿಧ ಕ್ಷೇತ್ರಗಳಲ್ಲಿ ಇದ್ದರೂ ಯಶಸ್ಸಿನ ಹಾದಿಯಲ್ಲಿದ್ದಾರೆ ಎಂದರು.
ಹೋಮಿಯೋಪತಿ ದಿನಾಚರಣೆ ಮೂಲಕ ಹಳೆಯ ವಿದ್ಯಾರ್ಥಿಗಳನ್ನು ಹಾಗೂ ಅವರ ವ್ಯಕ್ತಿತ್ವವನ್ನು ಮೆಲುಕು ಹಾಕುವ ಕಾರ್ಯ ಆಗಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಕೇರಳ ಸರಕಾರದ ಹೋಮಿಯೋಪತಿ ವಿಭಾಗದ ವೈದ್ಯಕೀಯ ಅಧಿಕಾರಿ ಡಾ. ಜೆರಾಲ್ಡ್ ಜಯಕುಮಾರ್ ಮತ್ತು ಡಾ. ಬಿನುರಾಜ್ ಟಿ.ಕೆ. ಜತೆಗೂಡಿ ಹೊರತಂದ ‘ಹೋಮಿಯೋ ಎವಿಡೆನ್ಸ್ ಡಾಟ್‌ಕಾಂ ಎಂಬ ಡಿಜಿಟಲ್ ಡಾಟಾಬೇಸ್ ವೆಬ್‌ಸೈಟ್‌ಗೆ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ಆಡಳಿತಾಧಿಕಾರಿ ಫಾ. ರೋಷನ್ ಕ್ರಾಸ್ತಾ ಬಿಡುಗಡೆಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು