3:56 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಫಾದರ್ ಮಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವಿನೂತನ ಶೈಲಿಯ ಹೃದ್ರೋಗ ಶಸ್ತ್ರ ಚಿಕಿತ್ಸೆ: ವಯಸ್ಸಾದ ರೋಗಿಗೆ ಜೀವದಾನ

29/03/2024, 22:49

ಮಂಗಳೂರು(reporterkarnataka.com) :ನಗರದ ಫಾದರ್ ಮಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹೃದ್ರೋಗ ಚಿಕಿತ್ಸೆ ಶಾಸ್ತ್ರ ವಿಭಾಗದ ಹೃದ್ರೋಗ ತಜ್ಞರು ಹಾಸನ ಮೂಲದ 61 ವರ್ಷ ಪ್ರಾಯದ ರೋಗಿಗೆ ಯಶಸ್ವಿಯಾಗಿ
ಆಧುನಿಕ, ವಿನೂತನ ಶೈಲಿಯ ಇಂಟರ್‌ವೆಂಶನಲ್ ಕಾರ್ಯ ವಿಧಾನ ಚಿಕಿತ್ಸೆಯ ಮೂಲಕ ಜೀವದಾನ ನೀಡಿದ್ದಾರೆ.
ಕಠಿಣ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ, ಯಾವುದೇ ತೆರನಾದ ಕಾರ್ಯನಿರ್ವಹಿಸಲು ಅಶಕ್ತರಾಗಿದ್ದ ಹಾಸನ ನಗರ ಮೂಲದ ರೋಗಿಯು ಫಾದರ್ ಮಲ್ಲರ್ ಆಸ್ಪತ್ರೆಯ ಹೃದ್ರೋಗ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ. ಎಚ್. ಪ್ರಭಾಕರ್‌ ಅವರನ್ನು ಸಂಪರ್ಕಿಸಿ ತಮ್ಮ ಉಸಿರಾಟ ಸಮಸ್ಯೆಯನ್ನು ತಿಳಿಸಿದ್ದರು.
ರೋಗಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ವೈದ್ಯರು ರೋಗಿಯು ತೀವ್ರ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ನವೆಂಬರ್ 2023ರಂದು ಹೃದಯ ಮಹಾ ಅಪಧಮನಿ ಕವಟ ಬದಲಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇತ್ತೀಚೆಗೆ ಕಠಿಣ ಉಸಿರಾಟದ ಸಮಸ್ಯೆಗೊಳಗಾಗಿ ಡಾ. ಪ್ರಭಾಕರ್ ಅವರ ಸಲಹೆ ಮತ್ತು
ಚಿಕಿತ್ಸೆಗೆ ಆಗಮಿಸಿದ್ದರು. ವೈದ್ಯರು ರೋಗಿಯ ಸೂಕ್ಷ್ಮ ತಪಾಸಣೆ ಮೂಲಕ ಹೃದಯ ಕವಾಟವು ಹಾನಿಯಾಗಿದ್ದು, ಗಂಭೀರ ಸಮಸ್ಯೆ ಮತ್ತು ಜೀವಕ್ಕೆ ಅಪಾಯಕಾರಿಯಾಗಿದ್ದು, ತಕ್ಷಣ ಡಾ. ಪ್ರಭಾಕರ್ ಅವರು ಡಾ. ಪ್ರದೀಪ್ ಪಿರೇರಾ, ಡಾ. ಕೆ. ಟಿ. ಆನಂದ್ ವೈದ್ಯರ ತಂಡ, ರೋಗಿಯ ಗಂಭೀರ ಪರಿಸ್ಥಿತಿಯನ್ನು ಮನಗಂಡು, 4 ಗಂಟೆ ಅವಧಿಯ ವಿನೂತನ ಶೈಲಿಯ ಇಂಟರ್‌ವೆಂಶನಲ್ ಕಾರ್ಯ ವಿಧಾನದ ಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಿ, ರೋಗಿಯು ಸಾಮಾನ್ಯ ಉಸಿರಾಟ ನಡೆಸುವಂತೆ ಮಾಡಿದರು.
ರೋಗಿಯು ಒಂದು ವಾರದ ಬಳಿಕ ಆಸ್ಪತ್ರೆಯಿಂದ ಬಿಡುಗಡೆಗೊಂಡು, ತಮ್ಮ ಊರಾದ ಹಾಸನ ನಗರದಲ್ಲಿ ಸಾಮಾನ್ಯ ಆರಾಮದಾಯಕ ಜೀವನವನ್ನು ನಡೆಸುತ್ತಿದ್ದಾರೆ. ಇಂತಹ ಹೃದ್ರೋಗ ಚಿಕಿತ್ಸೆಯು ದೇಶದ ಕೇವಲ ಐದಾರು ಆಸ್ಪತ್ರೆಗಳಲ್ಲಿ ಮಾತ್ರ ನಿರ್ವಹಿಸುತ್ತಾರೆ ಎಂದು ಡಾ. ಪ್ರಭಾಕರ್ ಮಾಹಿತಿ ನೀಡಿದ್ದಾರೆ.
ಈ ಅಪಾಯಕಾರಿ ಕಠಿಣ ಶಸ್ತ್ರ ಚಿಕಿತ್ಸಯನ್ನು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ನಿರ್ವಹಿಸಿದ್ದೇವೆ ಎಂದು ಡಾ. ಪ್ರದೀಪ್ ಪಿರೇರಾ ಮಾಹಿತಿ ನೀಡಿದ್ದಾರೆ. ಫಾದರ್ ಮುಲ್ಲರ್ ಸಂಸ್ಥೆ ಗಳ ನಿರ್ದಶರಾದ ರೆ| ಫಾ| ರಿಚಾರ್ಡ್ ಕೊವೆಲ್ಲೊರವರು ಈ ವೈದ್ಯರ ತಂಡದ ಗಮನಾರ್ಹ ಸಾಧನೆಯನ್ನು ಪ್ರಶಂಶಿಸಿ ಅಭಿನಂದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು