9:15 PM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಫಾದರ್‌ ಮುಲ್ಲರ್ಸ್‌ ಮೆಡಿಕಲ್‌ ಕಾಲೇಜು ಎಂಬಿಬಿಎಸ್‌ 27ನೇ ಬ್ಯಾಚ್‌ ಶೈಕ್ಷಣಿಕ ವರ್ಷಕ್ಕೆ ಚಾಲನೆ: ವೈಟ್‌ ಕೋಟ್‌ ಸಮಾರಂಭ

11/10/2025, 20:33

ಮಂಗಳೂರು(reporterkarnataka.com): ನಗರದ ಫಾದರ್‌ ಮುಲ್ಲರ್ಸ್‌ ಮೆಡಿಕಲ್‌ ಕಾಲೇಜಿನ ಎಂಬಿಬಿಎಸ್‌ ವಿದ್ಯಾರ್ಥಿಗಳ ಈ ಸಾಲಿನ 27ನೇ ಬ್ಯಾಚ್‌ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡುವುದು ಹಾಗೂ ವೈಟ್‌ ಕೋಟ್‌ ಸಮಾರಂಭವು ಕಾಲೇಜು ಸಭಾಂಗಣದಲ್ಲಿ ಶನಿವಾರ ನಡೆಯಿತು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕೆಥೋಲಿಕ್ ಶೈಕ್ಷಣಿಕ ಮಂಡಳಿಯ ಕಾರ್ಯದರ್ಶಿ ವಂ.ಡಾ|ಲಿಯೋ ಲಸ್ರಾಡೊ ಅವರು ಮಾತನಾಡುತ್ತಾ ಮೂರು ದಶಕಗಳ ಹಿಂದೆ ವೈದ್ಯರಾಗುವುದಕ್ಕೆ ತಮಗೆ ಇದ್ದ ಉತ್ಸಾಹವನ್ನು ನೆನಪಿಸಿಕೊಂಡು, ನನಗೆ ಆ ಕನಸು ನನಸಾಗಿಸಲು ಅಸಾಧ್ಯವಾದರೂ ವೈದ್ಯಕೀಯ ವೃತ್ತಿ ಬಗ್ಗೆ ಎಂದೆಂದೂ ಗೌರವ ಹೊಂದಿದ್ದೇನೆ ಎಂದರು.
ವಿದ್ಯಾರ್ಥಿಗಳು ಯಾವಾಗಲೂ ಜೀವನ ಪರ್ಯಂತ ಕಲಿಕೆ ಹಾಗೂ ಸೇವೆಯ ಪ್ರಯಾಣವನ್ನು ತಮ್ಮದಾಗಿಸಿಕೊಳ್ಳಬೇಕು, ಇತರರ ನೋವುಗಳನ್ನು ಅರಿತುಕೊಂಡು ಅವರಿಗಾಗಿ ಸೇವೆ ಸಲ್ಲಿಸುವುದರತ್ತ ಗಮನ ಹರಿಸಬೇಕು, ಅಲ್ಲದೆ ತಮ್ಮ ಹೆತ್ತವರ ಹಾಗೂ ಹಿತೈಷಿಗಳ ತ್ಯಾಗಗಳನ್ನು ಮರೆಯಬಾರದು, ಭಗವಂತನ ಮಾರ್ಗದರ್ಶನವನ್ನು ಎಂದಿಗೂ ಕೈಬಿಡಬಾರದು ಎಂದು ಸಲಹೆ ನೀಡಿದರು.
ಫಾದರ್‌ ಮುಲ್ಲರ್ಸ್‌ ವೈದ್ಯಕೀಯ ಕಾಲೇಜು ಚಿಕಿತ್ಸೆಯ ತನ್ನ ದೈವೀಕ ಅಭಿಯಾನವನ್ನು ಮುಂದುವರಿಸುತ್ತಾ ಬಂದಿದೆ, ಯಾವುದೇ ಲಾಭ ನಷ್ಟದ ಬಗ್ಗೆ ಚಿಂತಿಸದೆ ಸೇವಾ ನಿರತವಾಗಿರುವುದು ಶ್ಲಾಘನೀಯ ಎಂದರು.
ಫಾ.ಮುಲ್ಲರ್ಸ್‌ ಚಾರಿಟಬಲ್‌ ಟ್ರಸ್ಟ್‌ ನಿರ್ದೇಶಕ ವಂ.ಫಾ.ಫಾವೊಸ್ತಿನ್‌ ಲ್ಯೂಕಸ್‌ ಲೋಬೊ ಅವರು ಮಾತನಾಡುತ್ತಾ, ವಿದ್ಯಾರ್ಥಿಗಳು ದೈವಿಕ ಶಕ್ತಿಯ ಕರೆಯನ್ನು ಸ್ವೀಕರಿಸಿ ಆರೈಕೆ, ಚಿಕಿತ್ಸೆಯ ಕ್ಷೇತ್ರವನ್ನು ಪ್ರವೇಶಿಸುತ್ತಿದ್ದೀರಿ, ಇದು ಕೇವಲ ಜ್ಞಾನ ಮಾತ್ರವಲ್ಲದೆ ಅನುಭೂತಿ, ಮಾನವೀಯತೆ ಹಾಗೂ ನಂಬಿಕೆಯನ್ನೂ ಕೇಳುತ್ತದೆ ಎಂದು ನೆನಪಿಸಿದರು.
ವೈದ್ಯಕೀಯ ವೃತ್ತಿಗೆ ಹೊಸದಾಗಿ ಪಾದಾರ್ಪಣೆ ಮಾಡುವ ವಿದ್ಯಾರ್ಥಿಗಳ ಸೇರ್ಪಡೆಯನ್ನು ಸಂಕೇತಿಸುವ ವೈಟ್‌ ಕೋಟ್‌ ಸಮಾರಂಭದಲ್ಲಿ ವೈದ್ಯಕೀಯ ಶಿಕ್ಷಣ ಘಟಕ ಮುಖ್ಯಸ್ಥ ಪ್ರೊ.ಡಾ.ನಾಗೇಶ್‌ ಕೆ ಅವರು ರಾಷ್ಟ್ರೀಯ ವೈದ್ಯಕೀಯ ಆಯೋಗದ ಮಾರ್ಗಸೂಚಿಯಂತೆ ಪ್ರತಿಜ್ಞಾವಿಧಿ ಬೋಧಿಸಿದರು. ಮೊದಲಬಾರಿಗೆ ವೈದ್ಯರು ಧರಿಸುವ ವೈಟ್‌ ಕೋಟ್‌ ಧರಿಸುವ ಮೂಲಕ ವಿದ್ಯಾರ್ಥಿಗಳು ಹೆಮ್ಮೆ ವ್ಯಕ್ತಪಡಿಸಿ, ಆರೈಕೆ, ಚಿಕಿತ್ಸೆಯ ಪವಿತ್ರ ಜವಾಬ್ದಾರಿ ನಿರ್ವಹಿಸುವ ಪ್ರತಿಜ್ಞೆ ಸ್ವೀಕರಿಸಿದರು.
ಸಮಾರಂಭದ ಭಾಗವಾಗಿ ಫಾ.ಮುಲ್ಲರ್ಸ್‌ ಆಸ್ಪತ್ರೆಯ ಆಡಳಿತಾಧಿಕಾರಿ ಫಾ.ಜಾರ್ಜ್‌ ಜೀವನ್‌ ಸಿಕ್ವೇರ ಅವರು ಪ್ಲಾಸ್ಟಿಕ್‌ ಫ್ರೀ ಕ್ಯಾಂಪಸ್‌ ಅಭಿಯಾನಕ್ಕೆ ಚಾಲನೆ ನೀಡಿದರು.
ಫಾ.ಮುಲ್ಲರ್ಸ್‌ ಮೆಡಿಕಲ್‌ ಕಾಲೇಜು ಆಡಳಿತಾಧಿಕಾರಿ ವಂ.ಡಾ.ಮೈಕೇಲ್‌ ಸಾಂತುಮಯೊರ್‌ ಸ್ವಾಗತಿಸಿ, ವೈದ್ಯಕೀಯ ಕಾಲೇಜಿನ ಡೀನ್ ಡಾ.ಆಂಟನಿ ಸಿಲ್ವನ್‌ ಡಿʼಸೋಜ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು