ಇತ್ತೀಚಿನ ಸುದ್ದಿ
ಸುರತ್ಕಲ್ ಫಾಝಿಲ್ ಕೊಲೆ ಪ್ರಕರಣ; 6 ಮಂದಿ ಬಂಧನ: ಪೊಲೀಸ್ ಕಮಿಷನರ್ ಶಶಿಕುಮಾರ್
02/08/2022, 15:34

ಸುರತ್ಕಲ್(reporterkarnataka.com): ಸುರತ್ಕಲ್ ಮುಹಮ್ಮದ್ ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಪಣಂಬೂರು ಎಸಿಪಿ ಕಚೇರಿಯಿಂದ ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಪೊಲೀಸ್ ಕಮಿಷನರ್ ಶಶಿಕುಮಾರ್ ಈ ವಿಷಯ ತಿಳಿಸಿದರು.
ಆರೋಪಿಗಳು ವಿಚಾರಣೆಯ ವೇಳೆ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ನುಡಿದರು.
ಘಟನೆಗೆ ಸಂಬಂಧಿಸಿದಂತೆ ದುಷ್ಕರ್ಮಿಗಳು ಹತ್ಯೆಗೆ ಬಳಸಿದ್ದ ಕಾರಿನ ನೋಂದಣಿ ಸಂಖ್ಯೆ ಪತ್ತೆ ಹಚ್ಚಿ ಅದರ ಮಾಲಕ ಅಜಿತ್ ಕ್ರಾಸ್ತ ಎಂಬಾತನನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಆತ ಹೆಚ್ಚುವರಿ ಹಣ ಪಡೆದು ಕಾರನ್ನು ಬಾಡಿಗೆ ರೂಪದಲ್ಲಿ ನೀಡಿರುವುದಾಗಿ ಮಾಹಿತಿ ನೀಡಿದ್ದ.ಆತನ ಮಾಹಿತಿಯಂತೆ ಕಾರ್ಯ ಪ್ರವೃತ್ತರಾದ ಪೊಲೀಸ್ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿದು ಬಂದಿದೆ.