2:42 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಫಾಝೀಲ್ ಕೊಲೆ ಪ್ರಕರಣ ಮರು ತನಿಖೆಯಾಗಲಿ; ಹಿಂಸೆಗೆ ಪ್ರಚೋದಿಸುವವರ ಗಡಿಪಾರು ಮಾಡಿ: ಪ್ರತಿಪಕ್ಷದ ಉಪ ನಾಯಕ ಖಾದರ್ ಆಗ್ರಹ

30/01/2023, 17:51

ಮಂಗಳೂರು(reporterkarnataka.com) ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆಯ ಪ್ರಕರಣದ ಮರು ತನಿಖೆ ಮಾಡಬೇಕು. ಹಿಂಸೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡುವವರನ್ನು ಕೂಡಲೇ ಗಡೀಪಾರು ಮಾಡಬೇಕು. ಹಿಂಸೆಗೆ ಪ್ರೇರೇಪಣೆ ನೀಡುವಂತಹವರಿಗೆ ಕಾನೂನು ರೀತ್ಯ ಶಿಕ್ಷೆ ಆಗಬೇಕು ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಒತ್ತಾಯಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜಕೀಯ ಲಾಭಕ್ಕಾಗಿ ಧರ್ಮಗಳ ನಡುವೆ ಅವಿಶ್ವಾಸ ಮೂಡಿಸುವ, ಕೊಲೆಗೆ ಪ್ರೇರಣೆ ನೀಡುವ ಹೇಳಿಕೆ ನೀಡುವುದು ಸಮಾಜಕ್ಕೆ ಅಪಾಯಕಾರಿ. ಇಂತಹ ಹೇಳಿಕೆ ನೀಡುವವರು ನಿಜವಾದ ದೇಶದ್ರೋಹಿಗಳು. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ
ಎಲ್ಲ ಕೊಲೆ ಪ್ರಕರಣಗಳ ನೈಜ ಅಪರಾಧಿಗಳಿಗೆ ಶಿಕ್ಷೆ ಕೊಡಿಸುವ ಹೆಜ್ಜೆ ಇಡಲಾಗುತ್ತದೆ ಎಂದರು.

ಸಮಾಜವೂ ಸೌಹಾರ್ದವಾಗಿ ಇರಬೇಕು. ಯಾರದ್ದೂ ಕೂಡ ಕೊಲೆ ಆಗಬಾರದು. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯದ ಯಾವುದೇ ಯುವಕರ ಕೊಲೆ, ಸಾವು ನೋವುಗಳು ಆಗದಂತಹ ಸಮಾಜ ನಿರ್ಮಾಣ ಮಾಡಬೇಕು. ರಾಜಕೀಯ ಮತ್ತು ವ್ಯಾಪಾರವೇ ಬೇರೆ, ಆದರೆ ಕೊಲೆಗೆ ಪ್ರೇರೇಪಣೆ ನೀಡುವಂತಹ ಬಹಿರಂಗ ಹೇಳಿಕೆ ನಿಜಕ್ಕೂ ಆತಂಕಕಾರಿ ಆಗಿದೆ ಎಂದು ಅವರು ನುಡಿದರು.

ಉಳ್ಳಾಲ ಕ್ಷೇತ್ರದಲ್ಲಿ ಎಲ್ಲರೂ ಒಗ್ಗಟ್ಟಾಗಿ ಇದ್ದಾರೆ. ಶಾಂತಿ ಕದಡುವ ಕೃತ್ಯ ನಿರಂತರ ನಡೆಯುತ್ತಲೇ ಇದೆ. ಆದರೆ ಅದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಲ್ಲ. ಇಂತಹ ಕೃತ್ಯಗಳು ನಡೆಯದಂತೆ ತಡೆಯಲು ಪೊಲೀಸ್ ಇಲಾಖೆ ಮುಂದಾಗಬೇಕು. ಸತ್ಯಾಂಶ ಜನರಿಗೆ ಗೊತ್ತಾಗಬೇಕು. ವೀರರಾಣಿ ಅಬ್ಬಕ್ಕ, ಚರ್ಚ್, ಮಸೀದಿಗಳು ಇರುವಂತಹ ಕ್ಷೇತ್ರ ಆಗಿದೆ. ಯಾರ ನಡುವೆಯೂ ದ್ವೇಷ ಭಾವನೆ ಇಲ್ಲಿ ಇಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು