9:00 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸುರತ್ಕಲ್ ಫಾಝಿಲ್‌ ಕೊಲೆ ಪ್ರಕರಣ; 6 ಮಂದಿ ಬಂಧನ: ಪೊಲೀಸ್ ಕಮಿಷನರ್ ಶಶಿಕುಮಾರ್

02/08/2022, 15:34

ಸುರತ್ಕಲ್(reporterkarnataka.com): ಸುರತ್ಕಲ್ ಮುಹಮ್ಮದ್ ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. 

ಪಣಂಬೂರು ಎಸಿಪಿ ಕಚೇರಿಯಿಂದ ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಪೊಲೀಸ್ ಕಮಿಷನರ್ ಶಶಿಕುಮಾರ್ ಈ ವಿಷಯ ತಿಳಿಸಿದರು.

ಆರೋಪಿಗಳು ವಿಚಾರಣೆಯ ವೇಳೆ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ನುಡಿದರು.

ಘಟನೆಗೆ ಸಂಬಂಧಿಸಿದಂತೆ ದುಷ್ಕರ್ಮಿಗಳು ಹತ್ಯೆಗೆ ಬಳಸಿದ್ದ ಕಾರಿನ ನೋಂದಣಿ‌ ಸಂಖ್ಯೆ ಪತ್ತೆ ಹಚ್ಚಿ ಅದರ‌‌ ಮಾಲಕ ಅಜಿತ್ ಕ್ರಾಸ್ತ ಎಂಬಾತನನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಆತ ಹೆಚ್ಚುವರಿ ಹಣ ಪಡೆದು ಕಾರನ್ನು ಬಾಡಿಗೆ ರೂಪದಲ್ಲಿ ನೀಡಿರುವುದಾಗಿ ಮಾಹಿತಿ ನೀಡಿದ್ದ.ಆತನ ಮಾಹಿತಿಯಂತೆ ಕಾರ್ಯ ಪ್ರವೃತ್ತರಾದ ಪೊಲೀಸ್‌ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು