8:30 PM Sunday26 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಫೆಬ್ರವರಿ 17ರಂದು ತಿರುವೈಲೋತ್ಸವ: ಸಂಕು ಪೂಂಜಾ- ದೇವು ಪೂಂಜಾ ಜೋಡುಕೆರೆ ಕಂಬಳ

06/02/2024, 14:20

ಮಂಗಳೂರು(reporterkarnataka.com):ತುಳುನಾಡಿನ ತಿರುವೈಲೋತ್ಸವ ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಳ ಎದುರಿನ ತಿರುವೈಲು ಗುತ್ತು ವಿನ ಕಂಬಳ ಗದ್ದೆಯಲ್ಲಿ ಫೆಬ್ರವರಿ 17 ರಂದು ನಡೆಯಲಿದೆ.

ವಾಮಂಜೂರು ತಿರುವೈಲು ಗುತ್ತು ಸಂಕು ಪೂಂಜಾ ದೇವು ಪೂಂಜಾ ಜೋಡುಕೆರೆ ಕಂಬಳ ತಿರುವೈಲು ಗುತ್ತು ಕಂಬಳ ಸಂಸ್ಥಾಪಕ, ತಿರುವೈಲು ಗುತ್ತು ಕಂಬಳ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಹಾಗೂ ತಿರುವೈಲು ಗುತ್ತು ಗೌರವ ಅಧ್ಯಕ್ಷ ಮಿಥುನ್ ರೈ, ಕಂಬಳ ಸಮಿತಿ ಕಾರ್ಯಾಧ್ಯಕ್ಷ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವಿರೋಧ ಪಕ್ಷ ನಾಯಕ ಟಿ. ಪ್ರವೀಣ್ ಚಂದ್ರ ಆಳ್ವ ಅವರ ನೇತೃತ್ವದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿಧಾನ ಸಭಾ ಸ್ಪೀಕರ್ ಯು. ಟಿ. ಖಾದರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಉಪಸ್ಥಿತಿ ವಹಿಸುವರು.
ಕಾರ್ಯಕ್ರಮ ಉದ್ಘಾಟನೆಯನ್ನು,ಜಿ. ಆರ್. ಕಾಲೇಜು, ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಗಣೇಶ್ ರಾವ್ ನಡೆಸಲಿದ್ದಾರೆ.
ಅನೇಕ ರಾಜಕೀಯ ನಾಯಕರು, ಗಣ್ಯರು ಕಂಬಳದಲ್ಲಿ ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು