6:31 PM Monday6 - April 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು

ಇತ್ತೀಚಿನ ಸುದ್ದಿ

ಫೆಬ್ರವರಿ 17ರಂದು ತಿರುವೈಲೋತ್ಸವ: ಸಂಕು ಪೂಂಜಾ- ದೇವು ಪೂಂಜಾ ಜೋಡುಕೆರೆ ಕಂಬಳ

06/02/2024, 14:20

ಮಂಗಳೂರು(reporterkarnataka.com):ತುಳುನಾಡಿನ ತಿರುವೈಲೋತ್ಸವ ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಳ ಎದುರಿನ ತಿರುವೈಲು ಗುತ್ತು ವಿನ ಕಂಬಳ ಗದ್ದೆಯಲ್ಲಿ ಫೆಬ್ರವರಿ 17 ರಂದು ನಡೆಯಲಿದೆ.

ವಾಮಂಜೂರು ತಿರುವೈಲು ಗುತ್ತು ಸಂಕು ಪೂಂಜಾ ದೇವು ಪೂಂಜಾ ಜೋಡುಕೆರೆ ಕಂಬಳ ತಿರುವೈಲು ಗುತ್ತು ಕಂಬಳ ಸಂಸ್ಥಾಪಕ, ತಿರುವೈಲು ಗುತ್ತು ಕಂಬಳ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಹಾಗೂ ತಿರುವೈಲು ಗುತ್ತು ಗೌರವ ಅಧ್ಯಕ್ಷ ಮಿಥುನ್ ರೈ, ಕಂಬಳ ಸಮಿತಿ ಕಾರ್ಯಾಧ್ಯಕ್ಷ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವಿರೋಧ ಪಕ್ಷ ನಾಯಕ ಟಿ. ಪ್ರವೀಣ್ ಚಂದ್ರ ಆಳ್ವ ಅವರ ನೇತೃತ್ವದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿಧಾನ ಸಭಾ ಸ್ಪೀಕರ್ ಯು. ಟಿ. ಖಾದರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಉಪಸ್ಥಿತಿ ವಹಿಸುವರು.
ಕಾರ್ಯಕ್ರಮ ಉದ್ಘಾಟನೆಯನ್ನು,ಜಿ. ಆರ್. ಕಾಲೇಜು, ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಗಣೇಶ್ ರಾವ್ ನಡೆಸಲಿದ್ದಾರೆ.
ಅನೇಕ ರಾಜಕೀಯ ನಾಯಕರು, ಗಣ್ಯರು ಕಂಬಳದಲ್ಲಿ ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು