11:04 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಫೆಬ್ರವರಿ 17ರಂದು ತಿರುವೈಲೋತ್ಸವ: ಸಂಕು ಪೂಂಜಾ- ದೇವು ಪೂಂಜಾ ಜೋಡುಕೆರೆ ಕಂಬಳ

06/02/2024, 14:20

ಮಂಗಳೂರು(reporterkarnataka.com):ತುಳುನಾಡಿನ ತಿರುವೈಲೋತ್ಸವ ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಳ ಎದುರಿನ ತಿರುವೈಲು ಗುತ್ತು ವಿನ ಕಂಬಳ ಗದ್ದೆಯಲ್ಲಿ ಫೆಬ್ರವರಿ 17 ರಂದು ನಡೆಯಲಿದೆ.

ವಾಮಂಜೂರು ತಿರುವೈಲು ಗುತ್ತು ಸಂಕು ಪೂಂಜಾ ದೇವು ಪೂಂಜಾ ಜೋಡುಕೆರೆ ಕಂಬಳ ತಿರುವೈಲು ಗುತ್ತು ಕಂಬಳ ಸಂಸ್ಥಾಪಕ, ತಿರುವೈಲು ಗುತ್ತು ಕಂಬಳ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಹಾಗೂ ತಿರುವೈಲು ಗುತ್ತು ಗೌರವ ಅಧ್ಯಕ್ಷ ಮಿಥುನ್ ರೈ, ಕಂಬಳ ಸಮಿತಿ ಕಾರ್ಯಾಧ್ಯಕ್ಷ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವಿರೋಧ ಪಕ್ಷ ನಾಯಕ ಟಿ. ಪ್ರವೀಣ್ ಚಂದ್ರ ಆಳ್ವ ಅವರ ನೇತೃತ್ವದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿಧಾನ ಸಭಾ ಸ್ಪೀಕರ್ ಯು. ಟಿ. ಖಾದರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಉಪಸ್ಥಿತಿ ವಹಿಸುವರು.
ಕಾರ್ಯಕ್ರಮ ಉದ್ಘಾಟನೆಯನ್ನು,ಜಿ. ಆರ್. ಕಾಲೇಜು, ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಗಣೇಶ್ ರಾವ್ ನಡೆಸಲಿದ್ದಾರೆ.
ಅನೇಕ ರಾಜಕೀಯ ನಾಯಕರು, ಗಣ್ಯರು ಕಂಬಳದಲ್ಲಿ ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು