2:38 PM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಫೆಬ್ರವರಿ 17ರಂದು ತಿರುವೈಲೋತ್ಸವ: ಸಂಕು ಪೂಂಜಾ- ದೇವು ಪೂಂಜಾ ಜೋಡುಕೆರೆ ಕಂಬಳ

06/02/2024, 14:20

ಮಂಗಳೂರು(reporterkarnataka.com):ತುಳುನಾಡಿನ ತಿರುವೈಲೋತ್ಸವ ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಳ ಎದುರಿನ ತಿರುವೈಲು ಗುತ್ತು ವಿನ ಕಂಬಳ ಗದ್ದೆಯಲ್ಲಿ ಫೆಬ್ರವರಿ 17 ರಂದು ನಡೆಯಲಿದೆ.

ವಾಮಂಜೂರು ತಿರುವೈಲು ಗುತ್ತು ಸಂಕು ಪೂಂಜಾ ದೇವು ಪೂಂಜಾ ಜೋಡುಕೆರೆ ಕಂಬಳ ತಿರುವೈಲು ಗುತ್ತು ಕಂಬಳ ಸಂಸ್ಥಾಪಕ, ತಿರುವೈಲು ಗುತ್ತು ಕಂಬಳ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಹಾಗೂ ತಿರುವೈಲು ಗುತ್ತು ಗೌರವ ಅಧ್ಯಕ್ಷ ಮಿಥುನ್ ರೈ, ಕಂಬಳ ಸಮಿತಿ ಕಾರ್ಯಾಧ್ಯಕ್ಷ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವಿರೋಧ ಪಕ್ಷ ನಾಯಕ ಟಿ. ಪ್ರವೀಣ್ ಚಂದ್ರ ಆಳ್ವ ಅವರ ನೇತೃತ್ವದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿಧಾನ ಸಭಾ ಸ್ಪೀಕರ್ ಯು. ಟಿ. ಖಾದರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಉಪಸ್ಥಿತಿ ವಹಿಸುವರು.
ಕಾರ್ಯಕ್ರಮ ಉದ್ಘಾಟನೆಯನ್ನು,ಜಿ. ಆರ್. ಕಾಲೇಜು, ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಗಣೇಶ್ ರಾವ್ ನಡೆಸಲಿದ್ದಾರೆ.
ಅನೇಕ ರಾಜಕೀಯ ನಾಯಕರು, ಗಣ್ಯರು ಕಂಬಳದಲ್ಲಿ ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು