4:34 AM Saturday15 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಫೆಬ್ರವರಿ 17ರಂದು ತಿರುವೈಲೋತ್ಸವ: ಸಂಕು ಪೂಂಜಾ- ದೇವು ಪೂಂಜಾ ಜೋಡುಕೆರೆ ಕಂಬಳ

06/02/2024, 14:20

ಮಂಗಳೂರು(reporterkarnataka.com):ತುಳುನಾಡಿನ ತಿರುವೈಲೋತ್ಸವ ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಳ ಎದುರಿನ ತಿರುವೈಲು ಗುತ್ತು ವಿನ ಕಂಬಳ ಗದ್ದೆಯಲ್ಲಿ ಫೆಬ್ರವರಿ 17 ರಂದು ನಡೆಯಲಿದೆ.

ವಾಮಂಜೂರು ತಿರುವೈಲು ಗುತ್ತು ಸಂಕು ಪೂಂಜಾ ದೇವು ಪೂಂಜಾ ಜೋಡುಕೆರೆ ಕಂಬಳ ತಿರುವೈಲು ಗುತ್ತು ಕಂಬಳ ಸಂಸ್ಥಾಪಕ, ತಿರುವೈಲು ಗುತ್ತು ಕಂಬಳ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಹಾಗೂ ತಿರುವೈಲು ಗುತ್ತು ಗೌರವ ಅಧ್ಯಕ್ಷ ಮಿಥುನ್ ರೈ, ಕಂಬಳ ಸಮಿತಿ ಕಾರ್ಯಾಧ್ಯಕ್ಷ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವಿರೋಧ ಪಕ್ಷ ನಾಯಕ ಟಿ. ಪ್ರವೀಣ್ ಚಂದ್ರ ಆಳ್ವ ಅವರ ನೇತೃತ್ವದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿಧಾನ ಸಭಾ ಸ್ಪೀಕರ್ ಯು. ಟಿ. ಖಾದರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಉಪಸ್ಥಿತಿ ವಹಿಸುವರು.
ಕಾರ್ಯಕ್ರಮ ಉದ್ಘಾಟನೆಯನ್ನು,ಜಿ. ಆರ್. ಕಾಲೇಜು, ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಗಣೇಶ್ ರಾವ್ ನಡೆಸಲಿದ್ದಾರೆ.
ಅನೇಕ ರಾಜಕೀಯ ನಾಯಕರು, ಗಣ್ಯರು ಕಂಬಳದಲ್ಲಿ ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು