7:01 PM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಫೆ.13: ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯಿಂದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ 

09/02/2022, 11:33

ವಿಜಯನಗರ(reporterkarnataka.com) : ರಾಷ್ಟ್ರೀಯ ವಿಜ್ಞಾನ ದಿನ ಮತ್ತು ಡಾ. ಸಿ.ವಿ.ರಾಮನ್ ಜನ್ಮದಿನದ ಪ್ರಯುಕ್ತ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯು(KJVS)  ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಆಂಗ್ಲ ಮತ್ತು ಕನ್ನಡ ಮಾಧ್ಯಮದಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ನಡೆಸಲಿದೆ. ಆಸಕ್ತ ಪ್ರೌಢಶಾಲೆ  ವಿದ್ಯಾರ್ಥಿಗಳು ದಿನಾಂಕ  10-02-2022 ರೊಳಗೆ ಆನ್‌ಲೈನ್‌ ಅಥವಾ ಖುದ್ದಾಗಿ ನೋಂದಣಿ ಮಾಡಿಕೊಳ್ಳಬಹುದು.ಜಿಲ್ಲಾ ಮಟ್ಟದಲ್ಲಿ ಫೆಬ್ರವರಿ 13 ರ ಬೆ 11 ರಿಂದ 11 30 ಕ್ಕೆ ಆನ್‌ಲೈನ್‌ ಮೂಲಕ ರಸಪ್ರಶ್ನೆ ಸ್ಪರ್ಧೆ ನಡೆಯಲಿದೆ ಈ ಜಿಲ್ಲಾ  ಹಂತದಲ್ಲಿ ಆಯ್ಕೆಯಾದ ಮೂವರು ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು ಜೊತೆಗೆ ಮೂವರು ವಿದ್ಯಾರ್ಥಿಗಳಿಗೆ ಸಮಾಧಾನಕರ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು ಹಾಗೂ ಈ ಸ್ಪರ್ಧೆಗೆ ಭಾಗವಹಿಸಿದ ಪ್ರತಿ ವಿದ್ಯಾರ್ಥಿಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಗುತ್ತದೆ . ಈ ಜಿಲ್ಲಾ ಹಂತದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ದಿನಾಂಕ 20-02-2022 ರಂದು ರಾಜ್ಯ ಹಂತದಲ್ಲಿ ನಡೆಯುವ ಕ್ವಿಜ್ ಸ್ಪರ್ಧೆಗೆ ಅರ್ಹತೆ ಪಡೆದುಕೊಳ್ಳುತ್ತಾರೆ . ರಾಜ್ಯ ಹಂತದಲ್ಲಿನ ಪ್ರಥಮ ಸ್ಥಾನಕ್ಕೆ 6000 ರೂ ದ್ವಿತೀಯ ಸ್ಥಾನಕ್ಕೆ 5000 ರೂ ಹಾಗೂ ತೃತೀಯ ಸ್ಥಾನಕ್ಕೆ 4000 ರೂ ಗಳ ಕ್ಯಾಶ್ ಪ್ರೈಸ್ ಜೊತೆ ವಿಶೇಷ ಸ್ಮರಣಿಕೆ , ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು . ಈ ಸ್ಪರ್ಧೆಯಲ್ಲಿ ಭಾಗವಹಿಸಲು ನಿಮ್ಮ ತಾಲ್ಲೂಕು ಅಥವಾ ಜಿಲ್ಲಾ KJVS ಪಧಾದಿಕಾರಿಗಳನ್ನು ಸಂಪರ್ಕ ಮಾಡಿ.ಹೆಚ್ಚಿನ ಮಾಹಿತಿಗಾಗಿ ವಿಜಯನಗರ ಜಿಲ್ಲಾ ಈ ಕ್ವಿಜ್ ನ ಸಂಯೋಜಕರಾದ ಬಸವರಾಜ ಗೌಡ್ರ  (9535958192 ) ಮತ್ತು ತಾ.ಸಂ.ರಾದ  ಶ್ರೀ ನವೀನಕುಮಾರ (9449137008) ಇವರನ್ನು ಸಂಪರ್ಕ ಮಾಡಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು