9:16 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಫೆ.27: ಬಲೆ ತುಳು ಓದುಗ ಅಭಿಯಾನ; ಅಕಾಡೆಮಿಗೆ ರಥಬೀದಿ ಸರಕಾರಿ ಕಾಲೇಜು ವಿದ್ಯಾರ್ಥಿಗಳ ಭೇಟಿ

25/02/2025, 22:21

ಮಂಗಳೂರು(reporterkarnataka.com): ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ; ಬಲೆ ತುಳು ಓದುಗ’ ಅಭಿಯಾನದ ಮೂರನೇ ಕಾರ್ಯಕ್ರಮ ಫೆ. 27ರಂದು ನಡೆಯಲಿದೆ.
ಗುರುವಾರದಂದು ಮಂಗಳೂರು ರಥಬೀದಿಯ ಡಾ.ಪಿ.ದಯಾನಂದ ಪೈ- ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 40 ವಿದ್ಯಾರ್ಥಿಗಳು ಉರ್ವಾಸ್ಟೋರ್ ನಲ್ಲಿರುವ ತುಳು ಭವನದ ಗ್ರಂಥಾಲಯಕ್ಕೆ ಭೇಟಿ ನೀಡಿ ಅಧ್ಯಯನ ಹಾಗೂ ಸಂವಾದ ನಡೆಸುವರು.
ಕಾರ್ಯಕ್ರಮವನ್ನು ಬೆಳಿಗ್ಗೆ 10.00 ಗಂಟೆಗೆ ಸೆಂಟ್ರಲ್ ಬ್ಯೂರೋ ಆಫ್ ಕಮ್ಯೂನಿಕೇಶನ್ ಇಲಾಖೆಯ ಸಹಾಯಕ ನಿರ್ದೇಶಕ ಜಿತು ನಿಡ್ಲೆ ಅವರು ಉದ್ಘಾಟಿಸಿ, ದಿಕ್ಸೂಚಿ ಮಾತನ್ನಾಡುವರು. ಮುಖ್ಯ ಅತಿಥಿಯಾಗಿ ಹಿರಿಯ ಪತ್ರಕರ್ತ ಹಾಗೂ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಆನಂದ ಶೆಟ್ಟಿ ಭಾಗವಹಿಸುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು. ರಥಬೀದಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿ ಪ್ರಿಯಾ ಅತಿಥಿಯಾಗಿ ಭಾಗವಹಿಸುವರು ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು