11:06 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಫೆ.27: ಬಲೆ ತುಳು ಓದುಗ ಅಭಿಯಾನ; ಅಕಾಡೆಮಿಗೆ ರಥಬೀದಿ ಸರಕಾರಿ ಕಾಲೇಜು ವಿದ್ಯಾರ್ಥಿಗಳ ಭೇಟಿ

25/02/2025, 22:21

ಮಂಗಳೂರು(reporterkarnataka.com): ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ; ಬಲೆ ತುಳು ಓದುಗ’ ಅಭಿಯಾನದ ಮೂರನೇ ಕಾರ್ಯಕ್ರಮ ಫೆ. 27ರಂದು ನಡೆಯಲಿದೆ.
ಗುರುವಾರದಂದು ಮಂಗಳೂರು ರಥಬೀದಿಯ ಡಾ.ಪಿ.ದಯಾನಂದ ಪೈ- ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 40 ವಿದ್ಯಾರ್ಥಿಗಳು ಉರ್ವಾಸ್ಟೋರ್ ನಲ್ಲಿರುವ ತುಳು ಭವನದ ಗ್ರಂಥಾಲಯಕ್ಕೆ ಭೇಟಿ ನೀಡಿ ಅಧ್ಯಯನ ಹಾಗೂ ಸಂವಾದ ನಡೆಸುವರು.
ಕಾರ್ಯಕ್ರಮವನ್ನು ಬೆಳಿಗ್ಗೆ 10.00 ಗಂಟೆಗೆ ಸೆಂಟ್ರಲ್ ಬ್ಯೂರೋ ಆಫ್ ಕಮ್ಯೂನಿಕೇಶನ್ ಇಲಾಖೆಯ ಸಹಾಯಕ ನಿರ್ದೇಶಕ ಜಿತು ನಿಡ್ಲೆ ಅವರು ಉದ್ಘಾಟಿಸಿ, ದಿಕ್ಸೂಚಿ ಮಾತನ್ನಾಡುವರು. ಮುಖ್ಯ ಅತಿಥಿಯಾಗಿ ಹಿರಿಯ ಪತ್ರಕರ್ತ ಹಾಗೂ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಆನಂದ ಶೆಟ್ಟಿ ಭಾಗವಹಿಸುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು. ರಥಬೀದಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿ ಪ್ರಿಯಾ ಅತಿಥಿಯಾಗಿ ಭಾಗವಹಿಸುವರು ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು