7:38 AM Friday24 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಫೆ.27: ಬಲೆ ತುಳು ಓದುಗ ಅಭಿಯಾನ; ಅಕಾಡೆಮಿಗೆ ರಥಬೀದಿ ಸರಕಾರಿ ಕಾಲೇಜು ವಿದ್ಯಾರ್ಥಿಗಳ ಭೇಟಿ

25/02/2025, 22:21

ಮಂಗಳೂರು(reporterkarnataka.com): ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ; ಬಲೆ ತುಳು ಓದುಗ’ ಅಭಿಯಾನದ ಮೂರನೇ ಕಾರ್ಯಕ್ರಮ ಫೆ. 27ರಂದು ನಡೆಯಲಿದೆ.
ಗುರುವಾರದಂದು ಮಂಗಳೂರು ರಥಬೀದಿಯ ಡಾ.ಪಿ.ದಯಾನಂದ ಪೈ- ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 40 ವಿದ್ಯಾರ್ಥಿಗಳು ಉರ್ವಾಸ್ಟೋರ್ ನಲ್ಲಿರುವ ತುಳು ಭವನದ ಗ್ರಂಥಾಲಯಕ್ಕೆ ಭೇಟಿ ನೀಡಿ ಅಧ್ಯಯನ ಹಾಗೂ ಸಂವಾದ ನಡೆಸುವರು.
ಕಾರ್ಯಕ್ರಮವನ್ನು ಬೆಳಿಗ್ಗೆ 10.00 ಗಂಟೆಗೆ ಸೆಂಟ್ರಲ್ ಬ್ಯೂರೋ ಆಫ್ ಕಮ್ಯೂನಿಕೇಶನ್ ಇಲಾಖೆಯ ಸಹಾಯಕ ನಿರ್ದೇಶಕ ಜಿತು ನಿಡ್ಲೆ ಅವರು ಉದ್ಘಾಟಿಸಿ, ದಿಕ್ಸೂಚಿ ಮಾತನ್ನಾಡುವರು. ಮುಖ್ಯ ಅತಿಥಿಯಾಗಿ ಹಿರಿಯ ಪತ್ರಕರ್ತ ಹಾಗೂ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಆನಂದ ಶೆಟ್ಟಿ ಭಾಗವಹಿಸುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು. ರಥಬೀದಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿ ಪ್ರಿಯಾ ಅತಿಥಿಯಾಗಿ ಭಾಗವಹಿಸುವರು ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು