6:54 PM Wednesday26 - February 2025
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕಾಶಿ ನಂಜನಗೂಡು ಶ್ರೀಕಂಠೇಶ್ವರ ದೇಗುಲದಲ್ಲಿ ಮಹಾಶಿವರಾತ್ರಿ ಸಂಭ್ರಮ: ಕಪಿಲೆಯಲ್ಲಿ ಮಿಂದ ಭಕ್ತ… ವಿಧಾನ ಸೌಧ ಆವರಣದಲ್ಲಿ ಪುಸ್ತಕ ಮೇಳ: ಸಿದ್ಧತಾ ಕಾರ್ಯ ಪರಿಶೀಲಿಸಿದ ಸ್ಪೀಕರ್ ಖಾದರ್ Forest Fire | ಚಿಕ್ಕಮಗಳೂರು: ದೇವರು ಮನೆಗುಡ್ಡದಲ್ಲಿ ಕಾಡ್ಗಿಚ್ಚು; ಅರಣ್ಯ ಇಲಾಖೆ ಪರಿಶ್ರಮದಿಂದ… Pocso | ಬೆಂಗಳೂರು: ನಿರಂತರ ಅತ್ಯಾಚಾರಕ್ಕೊಳಗಾದ ಬಾಲಕಿಯ ಮೇಲೆ ಪೊಲೀಸ್ ಕಾನ್‌ಸ್ಟೇಬಲ್ ನಿಂದ… Exams | ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉಚಿತ… ಐಎಂಎ ಹಗರಣ: ರಂಜಾನ್ ಹಬ್ಬಕ್ಕೂ ಮುನ್ನ ಹಣ ಕಳೆದುಕೊಂಡವರಿಗೆ ಹರಿಹಾರ: ಸಚಿವ ಕೃಷ್ಣ… Basavanna | ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ… Sub Jail | ಮಂಗಳೂರು ಜೈಲ್ ಒಳಗೆ 2 ಪೊಟ್ಟಣ ಎಸೆತ: ಮಾಜಿ… ಸುಗ್ರಿವಾಜ್ಞೆ ಜಾರಿಯಾದರೂ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಗೃಹ ಸಚಿವರ ತವರಿನಲ್ಲೇ ಇಬ್ಬರು… ಕಂದಾಯ ಇಲಾಖೆ ಅಧಿಕಾರಿಗಳಿಂದ ಮುಜರಾಯಿ ಇಲಾಖೆಯ ಕೋಟ್ಯಂತರ ಹಣ ಗುಳುಂ: ಬ್ಯಾಂಕ್ ಮೆನೇಜರ್…

ಇತ್ತೀಚಿನ ಸುದ್ದಿ

ಫೆ.27: ಬಲೆ ತುಳು ಓದುಗ ಅಭಿಯಾನ; ಅಕಾಡೆಮಿಗೆ ರಥಬೀದಿ ಸರಕಾರಿ ಕಾಲೇಜು ವಿದ್ಯಾರ್ಥಿಗಳ ಭೇಟಿ

25/02/2025, 22:21

ಮಂಗಳೂರು(reporterkarnataka.com): ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ; ಬಲೆ ತುಳು ಓದುಗ’ ಅಭಿಯಾನದ ಮೂರನೇ ಕಾರ್ಯಕ್ರಮ ಫೆ. 27ರಂದು ನಡೆಯಲಿದೆ.
ಗುರುವಾರದಂದು ಮಂಗಳೂರು ರಥಬೀದಿಯ ಡಾ.ಪಿ.ದಯಾನಂದ ಪೈ- ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 40 ವಿದ್ಯಾರ್ಥಿಗಳು ಉರ್ವಾಸ್ಟೋರ್ ನಲ್ಲಿರುವ ತುಳು ಭವನದ ಗ್ರಂಥಾಲಯಕ್ಕೆ ಭೇಟಿ ನೀಡಿ ಅಧ್ಯಯನ ಹಾಗೂ ಸಂವಾದ ನಡೆಸುವರು.
ಕಾರ್ಯಕ್ರಮವನ್ನು ಬೆಳಿಗ್ಗೆ 10.00 ಗಂಟೆಗೆ ಸೆಂಟ್ರಲ್ ಬ್ಯೂರೋ ಆಫ್ ಕಮ್ಯೂನಿಕೇಶನ್ ಇಲಾಖೆಯ ಸಹಾಯಕ ನಿರ್ದೇಶಕ ಜಿತು ನಿಡ್ಲೆ ಅವರು ಉದ್ಘಾಟಿಸಿ, ದಿಕ್ಸೂಚಿ ಮಾತನ್ನಾಡುವರು. ಮುಖ್ಯ ಅತಿಥಿಯಾಗಿ ಹಿರಿಯ ಪತ್ರಕರ್ತ ಹಾಗೂ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಆನಂದ ಶೆಟ್ಟಿ ಭಾಗವಹಿಸುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು. ರಥಬೀದಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿ ಪ್ರಿಯಾ ಅತಿಥಿಯಾಗಿ ಭಾಗವಹಿಸುವರು ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು