7:36 PM Wednesday31 - December 2025
ಬ್ರೇಕಿಂಗ್ ನ್ಯೂಸ್
ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:…

ಇತ್ತೀಚಿನ ಸುದ್ದಿ

ಫೆ.27: ಬಲೆ ತುಳು ಓದುಗ ಅಭಿಯಾನ; ಅಕಾಡೆಮಿಗೆ ರಥಬೀದಿ ಸರಕಾರಿ ಕಾಲೇಜು ವಿದ್ಯಾರ್ಥಿಗಳ ಭೇಟಿ

25/02/2025, 22:21

ಮಂಗಳೂರು(reporterkarnataka.com): ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ; ಬಲೆ ತುಳು ಓದುಗ’ ಅಭಿಯಾನದ ಮೂರನೇ ಕಾರ್ಯಕ್ರಮ ಫೆ. 27ರಂದು ನಡೆಯಲಿದೆ.
ಗುರುವಾರದಂದು ಮಂಗಳೂರು ರಥಬೀದಿಯ ಡಾ.ಪಿ.ದಯಾನಂದ ಪೈ- ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 40 ವಿದ್ಯಾರ್ಥಿಗಳು ಉರ್ವಾಸ್ಟೋರ್ ನಲ್ಲಿರುವ ತುಳು ಭವನದ ಗ್ರಂಥಾಲಯಕ್ಕೆ ಭೇಟಿ ನೀಡಿ ಅಧ್ಯಯನ ಹಾಗೂ ಸಂವಾದ ನಡೆಸುವರು.
ಕಾರ್ಯಕ್ರಮವನ್ನು ಬೆಳಿಗ್ಗೆ 10.00 ಗಂಟೆಗೆ ಸೆಂಟ್ರಲ್ ಬ್ಯೂರೋ ಆಫ್ ಕಮ್ಯೂನಿಕೇಶನ್ ಇಲಾಖೆಯ ಸಹಾಯಕ ನಿರ್ದೇಶಕ ಜಿತು ನಿಡ್ಲೆ ಅವರು ಉದ್ಘಾಟಿಸಿ, ದಿಕ್ಸೂಚಿ ಮಾತನ್ನಾಡುವರು. ಮುಖ್ಯ ಅತಿಥಿಯಾಗಿ ಹಿರಿಯ ಪತ್ರಕರ್ತ ಹಾಗೂ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಆನಂದ ಶೆಟ್ಟಿ ಭಾಗವಹಿಸುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು. ರಥಬೀದಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿ ಪ್ರಿಯಾ ಅತಿಥಿಯಾಗಿ ಭಾಗವಹಿಸುವರು ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು