1:13 AM Saturday19 - September 2026
ಬ್ರೇಕಿಂಗ್ ನ್ಯೂಸ್
*ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ…

ಇತ್ತೀಚಿನ ಸುದ್ದಿ

ಫೆ.27: ಬಲೆ ತುಳು ಓದುಗ ಅಭಿಯಾನ; ಅಕಾಡೆಮಿಗೆ ರಥಬೀದಿ ಸರಕಾರಿ ಕಾಲೇಜು ವಿದ್ಯಾರ್ಥಿಗಳ ಭೇಟಿ

25/02/2025, 22:21

ಮಂಗಳೂರು(reporterkarnataka.com): ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ; ಬಲೆ ತುಳು ಓದುಗ’ ಅಭಿಯಾನದ ಮೂರನೇ ಕಾರ್ಯಕ್ರಮ ಫೆ. 27ರಂದು ನಡೆಯಲಿದೆ.
ಗುರುವಾರದಂದು ಮಂಗಳೂರು ರಥಬೀದಿಯ ಡಾ.ಪಿ.ದಯಾನಂದ ಪೈ- ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 40 ವಿದ್ಯಾರ್ಥಿಗಳು ಉರ್ವಾಸ್ಟೋರ್ ನಲ್ಲಿರುವ ತುಳು ಭವನದ ಗ್ರಂಥಾಲಯಕ್ಕೆ ಭೇಟಿ ನೀಡಿ ಅಧ್ಯಯನ ಹಾಗೂ ಸಂವಾದ ನಡೆಸುವರು.
ಕಾರ್ಯಕ್ರಮವನ್ನು ಬೆಳಿಗ್ಗೆ 10.00 ಗಂಟೆಗೆ ಸೆಂಟ್ರಲ್ ಬ್ಯೂರೋ ಆಫ್ ಕಮ್ಯೂನಿಕೇಶನ್ ಇಲಾಖೆಯ ಸಹಾಯಕ ನಿರ್ದೇಶಕ ಜಿತು ನಿಡ್ಲೆ ಅವರು ಉದ್ಘಾಟಿಸಿ, ದಿಕ್ಸೂಚಿ ಮಾತನ್ನಾಡುವರು. ಮುಖ್ಯ ಅತಿಥಿಯಾಗಿ ಹಿರಿಯ ಪತ್ರಕರ್ತ ಹಾಗೂ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಆನಂದ ಶೆಟ್ಟಿ ಭಾಗವಹಿಸುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು. ರಥಬೀದಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿ ಪ್ರಿಯಾ ಅತಿಥಿಯಾಗಿ ಭಾಗವಹಿಸುವರು ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು