8:52 AM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಫೆಬ್ರವರಿ 27ರಿಂದ ಪ್ರಥಮ ಬಾರಿಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ

11/02/2025, 10:30

ಮಂಗಳೂರು (reporterkarnataka.com): ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ನಾಡಿನ ಜನತೆಗೆ ಅತಿ ಅಮೂಲ್ಯವಾದ ಪುಸ್ತಕಗಳನ್ನು ಖರೀದಿಸಲು ಮತ್ತು ವೀಕ್ಷಿಸಲು ಫೆಬ್ರವರಿ 27 ರಿಂದ ಮಾರ್ಚ್ 3 ರವರೆಗೆ “ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ” ಏರ್ಪಡಿಸಲಾಗಿದೆ.
ಪುಸ್ತಕ ಮೇಳದಲ್ಲಿ, ನಾಡಿನ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದು. ಮಳಿಗೆಯೊಂದಕ್ಕೆ ರೂ. 1000 ಭದ್ರತಾ ಠೇವಣಿ ಡಿ.ಡಿ.ಯನ್ನು ಬೆಂಗಳೂರು, ವಿಧಾನಸೌಧ, ಕರ್ನಾಟಕ ವಿಧಾನ ಸಭೆ ಸಚಿವಾಲಯ ಕಾರ್ಯದರ್ಶಿಗಳ ಹೆಸರಿನಲ್ಲ್ಲಿ ಸಲ್ಲಿಸಬೇಕು.
ಪುಸ್ತಕ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಗ್ರಂಥಪಾಲಕರು, ಕರ್ನಾಟಕ ವಿಧಾನಸಭಾ ಸಚಿವಾಲಯ, ವಿಧಾನ ಸೌಧ, ಬೆಂಗಳೂರು ಅಥವಾ ಸಚಿವಾಲಯದ ವೆಬ್‍ಸೈಟ್: ತಿತಿತಿ.ಞಟಚಿ.ಞಚಿಡಿ.ಟಿiಛಿ.iಟಿ ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದು. ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಫೆ.12 ರಂದು ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು. ನಿರ್ಮಿಸಲಾಗುವ 75 ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗೆ ಕರ್ನಾಟಕ ವಿಧಾನ ಸಭೆ ಸಚಿವಾಲಯದ ಮುಖ್ಯ ಗ್ರಂಥಪಾಲಕರನ್ನು (ದೂ:080-22381350) ಸಂಪರ್ಕಿಸಬಹುದು ಎಂದು ಸಚಿವಾಲಯದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು