4:51 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಫೆಬ್ರವರಿ 27ರಿಂದ ಪ್ರಥಮ ಬಾರಿಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ

11/02/2025, 10:30

ಮಂಗಳೂರು (reporterkarnataka.com): ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ನಾಡಿನ ಜನತೆಗೆ ಅತಿ ಅಮೂಲ್ಯವಾದ ಪುಸ್ತಕಗಳನ್ನು ಖರೀದಿಸಲು ಮತ್ತು ವೀಕ್ಷಿಸಲು ಫೆಬ್ರವರಿ 27 ರಿಂದ ಮಾರ್ಚ್ 3 ರವರೆಗೆ “ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ” ಏರ್ಪಡಿಸಲಾಗಿದೆ.
ಪುಸ್ತಕ ಮೇಳದಲ್ಲಿ, ನಾಡಿನ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದು. ಮಳಿಗೆಯೊಂದಕ್ಕೆ ರೂ. 1000 ಭದ್ರತಾ ಠೇವಣಿ ಡಿ.ಡಿ.ಯನ್ನು ಬೆಂಗಳೂರು, ವಿಧಾನಸೌಧ, ಕರ್ನಾಟಕ ವಿಧಾನ ಸಭೆ ಸಚಿವಾಲಯ ಕಾರ್ಯದರ್ಶಿಗಳ ಹೆಸರಿನಲ್ಲ್ಲಿ ಸಲ್ಲಿಸಬೇಕು.
ಪುಸ್ತಕ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಗ್ರಂಥಪಾಲಕರು, ಕರ್ನಾಟಕ ವಿಧಾನಸಭಾ ಸಚಿವಾಲಯ, ವಿಧಾನ ಸೌಧ, ಬೆಂಗಳೂರು ಅಥವಾ ಸಚಿವಾಲಯದ ವೆಬ್‍ಸೈಟ್: ತಿತಿತಿ.ಞಟಚಿ.ಞಚಿಡಿ.ಟಿiಛಿ.iಟಿ ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದು. ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಫೆ.12 ರಂದು ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು. ನಿರ್ಮಿಸಲಾಗುವ 75 ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗೆ ಕರ್ನಾಟಕ ವಿಧಾನ ಸಭೆ ಸಚಿವಾಲಯದ ಮುಖ್ಯ ಗ್ರಂಥಪಾಲಕರನ್ನು (ದೂ:080-22381350) ಸಂಪರ್ಕಿಸಬಹುದು ಎಂದು ಸಚಿವಾಲಯದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು