2:55 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಫೆ. 7ರಂದು ಮಂಗಳೂರು ರಥೋತ್ಸವ: ಪೂರ್ವಭಾವಿ ನೂತನ ಬ್ರಹ್ಮರಥ ಸಮರ್ಪಣೆ

02/02/2022, 18:23

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com) : ಇತಿಹಾಸ ಪ್ರಸಿದ್ಧ ” ಮಂಗಳೂರು ರಥೋತ್ಸವ ” ಫೆಬ್ರವರಿ 7ರಂದು ನಡೆಯಲಿದ್ದು, ಇದರ ಪೂರ್ವಾಂಗ ಈ ಬಾರಿ ನೂತನವಾಗಿ ನಿರ್ಮಾಣಗೊಂಡ ಬ್ರಹ್ಮರಥವನ್ನು ಇಂದು ಸಮರ್ಪಿಸಲಾಯಿತು.


ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಬುಧವಾರ ಪೂರ್ವಾಹ್ನ 12:44 ರ ಅಭಿಜಿನ್ ಮುಹೂರ್ತದಲ್ಲಿ ರಥ ಸಮರ್ಪಣೆ ನೆರವೇರಿತು. ಬೆಳಿಗ್ಗೆ ಶ್ರೀ ದೇವರ ಸನ್ನಿಧಾನದಲ್ಲಿ ಮಹಾ ಪ್ರಾರ್ಥನೆ ತದನಂತರ ವಿದ್ವತ್ ವೈದಿಕರಿಂದ ಯಾಗ ಶಾಲೆಯಲ್ಲಿ ರಥ ಸಮರ್ಪಣಾ ಯಜ್ಞ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ 11:30ಕ್ಕೆ ಯಜ್ಞ ಮಹಾ ಪೂರ್ಣಾಹುತಿ ನೆರವೇರಿತು. ಬಳಿಕ ಪ್ರಧಾನ ವೀರ ವೆಂಕಟೇಶ ಮತ್ತು ಉತ್ಸವ ಶ್ರೀನಿವಾಸ ದೇವರ ರಥಾರೋಹಣ ನಡೆಯಿತು.

ಇದೇ ಸಂದರ್ಭದಲ್ಲಿ ನೂತನ ರಥ ಸಮರ್ಪಣೆ ಗೆ ಸೇವೆ ಸಲ್ಲಿಸಿದ ಮಹನೀಯರಿಗೆ ಶ್ರೀಗಳವರ ದಿವ್ಯ ಹಸ್ತಗಳಿಂದ ಗಂಧ ಪ್ರಸಾದ ನೀಡಲಾಯಿತು. ರಾತ್ರಿ ದೇವಸ್ಥಾನದ ಒಳಾಂಗಣದಲ್ಲಿ ಶ್ರೀಗಳವರ ಉಪಸ್ಥಿತಿಯಲ್ಲಿ ಸ್ವರ್ಣ ಗರುಡವಾಹನ ಸೇವೆ ನಡೆಯಿತು. ದೇವಳ ದ ಮೊಕ್ತೇಸರರಾದ ಸಿ ಎಲ್ ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು