3:57 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಫೆ. 7ರಂದು ಮಂಗಳೂರು ರಥೋತ್ಸವ: ಪೂರ್ವಭಾವಿ ನೂತನ ಬ್ರಹ್ಮರಥ ಸಮರ್ಪಣೆ

02/02/2022, 18:23

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com) : ಇತಿಹಾಸ ಪ್ರಸಿದ್ಧ ” ಮಂಗಳೂರು ರಥೋತ್ಸವ ” ಫೆಬ್ರವರಿ 7ರಂದು ನಡೆಯಲಿದ್ದು, ಇದರ ಪೂರ್ವಾಂಗ ಈ ಬಾರಿ ನೂತನವಾಗಿ ನಿರ್ಮಾಣಗೊಂಡ ಬ್ರಹ್ಮರಥವನ್ನು ಇಂದು ಸಮರ್ಪಿಸಲಾಯಿತು.


ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಬುಧವಾರ ಪೂರ್ವಾಹ್ನ 12:44 ರ ಅಭಿಜಿನ್ ಮುಹೂರ್ತದಲ್ಲಿ ರಥ ಸಮರ್ಪಣೆ ನೆರವೇರಿತು. ಬೆಳಿಗ್ಗೆ ಶ್ರೀ ದೇವರ ಸನ್ನಿಧಾನದಲ್ಲಿ ಮಹಾ ಪ್ರಾರ್ಥನೆ ತದನಂತರ ವಿದ್ವತ್ ವೈದಿಕರಿಂದ ಯಾಗ ಶಾಲೆಯಲ್ಲಿ ರಥ ಸಮರ್ಪಣಾ ಯಜ್ಞ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ 11:30ಕ್ಕೆ ಯಜ್ಞ ಮಹಾ ಪೂರ್ಣಾಹುತಿ ನೆರವೇರಿತು. ಬಳಿಕ ಪ್ರಧಾನ ವೀರ ವೆಂಕಟೇಶ ಮತ್ತು ಉತ್ಸವ ಶ್ರೀನಿವಾಸ ದೇವರ ರಥಾರೋಹಣ ನಡೆಯಿತು.

ಇದೇ ಸಂದರ್ಭದಲ್ಲಿ ನೂತನ ರಥ ಸಮರ್ಪಣೆ ಗೆ ಸೇವೆ ಸಲ್ಲಿಸಿದ ಮಹನೀಯರಿಗೆ ಶ್ರೀಗಳವರ ದಿವ್ಯ ಹಸ್ತಗಳಿಂದ ಗಂಧ ಪ್ರಸಾದ ನೀಡಲಾಯಿತು. ರಾತ್ರಿ ದೇವಸ್ಥಾನದ ಒಳಾಂಗಣದಲ್ಲಿ ಶ್ರೀಗಳವರ ಉಪಸ್ಥಿತಿಯಲ್ಲಿ ಸ್ವರ್ಣ ಗರುಡವಾಹನ ಸೇವೆ ನಡೆಯಿತು. ದೇವಳ ದ ಮೊಕ್ತೇಸರರಾದ ಸಿ ಎಲ್ ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು