6:32 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಫೆ. 7ರಂದು ಮಂಗಳೂರು ರಥೋತ್ಸವ: ಪೂರ್ವಭಾವಿ ನೂತನ ಬ್ರಹ್ಮರಥ ಸಮರ್ಪಣೆ

02/02/2022, 18:23

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com) : ಇತಿಹಾಸ ಪ್ರಸಿದ್ಧ ” ಮಂಗಳೂರು ರಥೋತ್ಸವ ” ಫೆಬ್ರವರಿ 7ರಂದು ನಡೆಯಲಿದ್ದು, ಇದರ ಪೂರ್ವಾಂಗ ಈ ಬಾರಿ ನೂತನವಾಗಿ ನಿರ್ಮಾಣಗೊಂಡ ಬ್ರಹ್ಮರಥವನ್ನು ಇಂದು ಸಮರ್ಪಿಸಲಾಯಿತು.


ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಬುಧವಾರ ಪೂರ್ವಾಹ್ನ 12:44 ರ ಅಭಿಜಿನ್ ಮುಹೂರ್ತದಲ್ಲಿ ರಥ ಸಮರ್ಪಣೆ ನೆರವೇರಿತು. ಬೆಳಿಗ್ಗೆ ಶ್ರೀ ದೇವರ ಸನ್ನಿಧಾನದಲ್ಲಿ ಮಹಾ ಪ್ರಾರ್ಥನೆ ತದನಂತರ ವಿದ್ವತ್ ವೈದಿಕರಿಂದ ಯಾಗ ಶಾಲೆಯಲ್ಲಿ ರಥ ಸಮರ್ಪಣಾ ಯಜ್ಞ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ 11:30ಕ್ಕೆ ಯಜ್ಞ ಮಹಾ ಪೂರ್ಣಾಹುತಿ ನೆರವೇರಿತು. ಬಳಿಕ ಪ್ರಧಾನ ವೀರ ವೆಂಕಟೇಶ ಮತ್ತು ಉತ್ಸವ ಶ್ರೀನಿವಾಸ ದೇವರ ರಥಾರೋಹಣ ನಡೆಯಿತು.

ಇದೇ ಸಂದರ್ಭದಲ್ಲಿ ನೂತನ ರಥ ಸಮರ್ಪಣೆ ಗೆ ಸೇವೆ ಸಲ್ಲಿಸಿದ ಮಹನೀಯರಿಗೆ ಶ್ರೀಗಳವರ ದಿವ್ಯ ಹಸ್ತಗಳಿಂದ ಗಂಧ ಪ್ರಸಾದ ನೀಡಲಾಯಿತು. ರಾತ್ರಿ ದೇವಸ್ಥಾನದ ಒಳಾಂಗಣದಲ್ಲಿ ಶ್ರೀಗಳವರ ಉಪಸ್ಥಿತಿಯಲ್ಲಿ ಸ್ವರ್ಣ ಗರುಡವಾಹನ ಸೇವೆ ನಡೆಯಿತು. ದೇವಳ ದ ಮೊಕ್ತೇಸರರಾದ ಸಿ ಎಲ್ ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು